Select Your Language

Notifications

webdunia
webdunia
webdunia
webdunia

ಕೊನೆಗೂ ಬೆಂಗಳೂರಿನತ್ತ ಪ್ರಯಾಣಿ ಬೆಳೆಸಿದ ಪ್ರಜ್ವಲ್‌ ರೇವಣ್ಣ: ವಿಮಾನ ನಿಲ್ದಾಣದಲ್ಲೇ ಬಂಧಿಸಲು ಎಸ್‌ಐಟಿ ಪ್ಲ್ಯಾನ್

Prajwal Revanna

sampriya

ಬೆಂಗಳೂರು , ಗುರುವಾರ, 30 ಮೇ 2024 (17:47 IST)
ಬೆಂಗಳೂರು: ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ವಿದೇಶದಲ್ಲಿ ತಂಗಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಅವರು ಇಂದು ಜರ್ಮನಿಯ ಮೂನಿಕ್‌ ನಗರದಿಂದ ಬೆಂಗಳೂರಿನತ್ತ ಹೊರಟಿದ್ದಾರೆನ ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮೂನಿಕ್ ನಗರದಿಂದ ಬೆಂಗಳೂರಿನತ್ತ ಹೊರಟಿದ್ದು, ಗುರುವಾರ ರಾತ್ರಿ 12.40 ಗಂಟೆ ಸುಮಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೂಲಗಳಿಂದ ಪ್ರಜ್ವಲ್‌ ರೇವಣ್ಣ ಅವರು ಏರ್ ಲುಫ್ತಾನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾರೆಂಬ ಮಾಹಿತಿತಿದೆ. ಇನ್ನೂ ಬೆಂಗಳೂರಿಗೆ ಆಗಮಿಸುತ್ತಿದ್ದ ಹಾಗೇ ಪ್ರಜ್ವಲ್‌ರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ‌

ಕೊನೆಗೂ ಬೆಂಗಳೂರಿನತ್ತ ಮುಖ ಮಾಡಿದ ಪ್ರಜ್ವಲ್‌ ರೇವಣ್ಣ: ವಿಮಾನ ನಿಲ್ದಾಣದಲ್ಲೇ ಬಂಧನ ಸಾಧ್ಯತೆ

Share this Story:

Follow Webdunia kannada

ಮುಂದಿನ ಸುದ್ದಿ

ಜೂನ್‌ 1ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ದಡ ಸೇರಲಿವೆ ದೋಣಿಗಳು