Webdunia - Bharat's app for daily news and videos

Install App

ನಾಮಪತ್ರ ಸಲ್ಲಿಕೆ ದಿನಾಂಕ ಬರೆಯುವಾಗ ಎಡವಟ್ಟು ಮಾಡಿದ ಪ್ರಕಾಶ್ ರಾಜ್

Webdunia
ಶುಕ್ರವಾರ, 22 ಮಾರ್ಚ್ 2019 (10:02 IST)
ಬೆಂಗಳೂರು: ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ನಟ ಪ್ರಕಾಶ್ ರಾಜ್ ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ.


ಆದರೆ ನಾಮಪತ್ರ ಸಲ್ಲಿಸುವ ಸುದ್ದಿಯನ್ನು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಾಕುವಾಗ ಪ್ರಕಾಶ್ ರಾಜ್ ಮಾಡಿದ ಎಡವಟ್ಟೊಂದು ಟ್ರೋಲಿಗರ ಬಾಯಿಗೆ ಆಹಾರವಾಯಿತು.

ನಾಮಪತ್ರ ಸಲ್ಲಿಸುವ ಆಹ್ವಾನ ಪತ್ರಿಕೆಯಲ್ಲಿ 22-3-2019 ಎಂದು ದಿನಾಂಕ ಬರೆಯುವ ಬದಲು 2009 ಎಂದು ಬರೆದು ಎಡವಟ್ಟು ಮಾಡಿಕೊಂಡಿದ್ದರು. ತಪ್ಪು ಗೊತ್ತಾಗುತ್ತಿದ್ದಂತೇ ಸರಿಪಡಿಸಿಕೊಂಡರು. ಆದರೆ ಅಷ್ಟರಲ್ಲಾಗಲೇ ಟ್ರೋಲಿಗರು ‘ಪ್ರಕಾಶ್ ರಾಜ್ ಎಷ್ಟು ಮೊದಲೇ ನಾಮಪತ್ರ ಸಲ್ಲಿಸಿದ್ದಾರೆ ನೋಡ್ರಪ್ಪಾ’ ಎಂದು ಕಾಲೆಳೆದಾಗಿತ್ತು.

ಇಂದು 9 ಗಂಟೆಯಿಂದ ರಿಚ್ಮಂಡ್ ವೃತ್ತ ಮೂಲಕವಾಗಿ ಮೆರವಣಿಗೆ ಮೂಲಕ ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿ ಬಳಿಕ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments