Webdunia - Bharat's app for daily news and videos

Install App

ಇಲ್ಲಿದ್ದವರು ಮೂಲ ಮುಸ್ಲಿಮರೇ ಅಲ್ಲ, ವಕ್ಫ್ ಗೆ ಲಕ್ಷಾಂತರ ಎಕರೆ ಭೂಮಿ ಎಲ್ಲಿಂದ: ಪ್ರಲ್ಹಾದ್ ಜೋಶಿ

Krishnaveni K
ಶುಕ್ರವಾರ, 1 ನವೆಂಬರ್ 2024 (09:44 IST)
ಬೆಂಗಳೂರು: ಭಾರತ ಮೂಲತಃ ಮುಸ್ಲಿಮ್ ರಾಷ್ಟ್ರವಲ್ಲ, ಇಲ್ಲಿದ್ದವರು ಮೂಲತಃ ಮುಸ್ಲಿಮರೇ ಅಲ್ಲ. ಹಾಗಿರುವಾಗ ವಕ್ಫ್ ಗೆ ಹೇಗೆ ಲಕ್ಷಾಂತರ ಎಕರೆ ಜಮೀನು ಬಂತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ.

ರಾಜ್ಯಾದ್ಯಂತ ಈಗ ವಕ್ಫ್ ಬೋರ್ಡ್ ನೋಟಿಸ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ವಿಜಯಪುರ, ಕಲಬುರಗಿ ಸೇರಿದಂತೆ ವಿವಿಧ ಕಡೆ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದು ಸಾಕಷ್ಟು ವಿವಾದಕ್ಕೆ ಗುರಿಯಾಗಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ‘ಹಿಂದೂಗಳ ವಿರುದ್ಧ ಓಲೈಕೆ ರಾಜಕಾರಣ, ತುಷ್ಠೀಕರಣ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ದಶಕಗಳಿಂದ ಅಧಿಕಾರ ಕಳೆದುಕೊಂಡರೂ ಬುದ್ಧಿ ಬಂದಿಲ್ಲ. ಜಾತ್ಯಾತೀತ ಹಣೆಪಟ್ಟಿಯಲ್ಲಿ ಹಿಂದೂಗಳಿಗೆ ದ್ರೋಹವೆಸಗುತ್ತಿದೆ.

ಜಮೀರ್ ಅವರಿಗೆ ಮತಾಂಧತೆ ಆವರಿಸಿದೆ. ಕಾಂಗ್ರೆಸ್ ಗೆ ಮಾನ ಮರ್ಯಾದೆ ಇದ್ದರೆ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಲಿ. ಅಪರಿಮಿತ ಅಧಿಕಾರ ವ್ಯಾಪ್ತಿಯ ವಕ್ಫ್ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಹೊರಟಿದೆ. ಇದಕ್ಕೆ ಕಾಂಗ್ರೆಸ್ ಓಲೈಕೆ ಬಿಟ್ಟು ಬೆಂಬಲಿಸಲಿ. ಜಗತ್ತಿನ ಯಾವ ಮುಸ್ಲಿಮ್ ರಾಷ್ಟ್ರದಲ್ಲೂ ವಕ್ಫ್ ಕಾನೂನಿಲ್ಲ. ಹಾಗಿರುವಾಗ ಭಾರತದಲ್ಲಿ ಕಾಂಗ್ರೆಸ್ ಕುಮ್ಮಕ್ಕಿನಿಂದ ಇಂತಹದ್ದೊಂದು ಪ್ರಶ್ನಾತೀತ ವಕ್ಫ್ ಕಾನೂನು ಇದೆ. ದೇಶದ ಯಾವುದೇ ದೇವಸ್ಥಾನಗಳ ಜಾಗ ಒಂದಿಂಚೂ ಹೆಚ್ಚಾಗದೇ ಇರುವಾಗ ವಕ್ಫ್ ಗೆ ಲಕ್ಷ ಲಕ್ಷ ಆಸ್ತಿ ಬಂತು? ಇಲ್ಲಿದ್ದ ಮುಸ್ಲಿಮರು ಹಿಂದೂಗಳೇ ಆಗಿದ್ದವರು. ಬೆದರಿಕೆ, ಆಮಿಷಕ್ಕೆ ಬಲಿಯಾದವರು. ಹೀಗಿರುವಾಗ ವಕ್ಫ್ ಗೆ ಹೇಗೆ ಲಕ್ಷಾಂತರ ಜಮೀನು ಬಂತು’ ಎಂದು ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments