Webdunia - Bharat's app for daily news and videos

Install App

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

Krishnaveni K
ಬುಧವಾರ, 23 ಜುಲೈ 2025 (11:10 IST)
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ವರ್ತಕರಿಗೆ ಜಿಎಸ್ ಟಿ ನೋಟಿಸ್ ವಿವಾದ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಹಾಗೂ ಡಿಸಿಎಂ ಇದಕ್ಕೆ ಕೇಂದ್ರ ಸರ್ಕಾರ ಕಾರಣ ಎಂದಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಲ್ಹಾದ್ ಜೋಶಿ ಇದು ರಾಜ್ಯ ಸರ್ಕಾರದ ಕೆಲಸ. ಕೇಂದ್ರ ಸರ್ಕಾರದ್ದಾಗಿದ್ದರೆ ಬೇರೆ ರಾಜ್ಯಗಳಲ್ಲೂ ಇದೇ ಸಮಸ್ಯೆಯಾಗಬೇಕಿತ್ತು. ಕರ್ನಾಟಕದಲ್ಲಿ ಮಾತ್ರ ಯಾಕಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.

‘GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ #CGST ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ #SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ.

ಜಿ ಎಸ್ ಟಿ‌ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ‌ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ‌ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ.

ಇದೀಗ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ‌, ಅವರಿಗೆ ತೊಂದರೆ ಕೊಡುತ್ತಿದ್ದಾರೆ. ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದ ನೋಟಿಸ್, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ.

ಯುಪಿಐ ಟ್ರಾನ್ಸಾಕ್ಷನ್ ಇದೀಗ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಹದಗೆಡಿಸುವ ದುಸಾಹಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿರುವುದು ನಿಜಕ್ಕೂ ದುರಂತ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಮುಂದಿನ ಸುದ್ದಿ
Show comments