Webdunia - Bharat's app for daily news and videos

Install App

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

Krishnaveni K
ಮಂಗಳವಾರ, 10 ಜೂನ್ 2025 (15:13 IST)
ಬೆಂಗಳೂರು: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರೆ, ಮಣಿಪುರಕ್ಕೆ ಇದೇ ಕಾರಣಕ್ಕೆ ಹೋಗ್ತಿಲ್ಲ ಎಂಬ ವಿಪಕ್ಷಗಳ ಆರೋಪಗಳಿಗೆ ಏನು ಹೇಳ್ತೀರಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಮಾಧ್ಯಮಗಳು ಪ್ರಶ್ನಿಸಿದ್ದು ಅದಕ್ಕೆ ಅವರ ಉತ್ತರ ಏನಿತ್ತು ನೋಡಿ.

ಮಣಿಪುರದಲ್ಲಿ ಸಾಕಷ್ಟು ಹಿಂಸಾಚಾರಗಳು ಆಗುತ್ತಲೇ ಇರುತ್ತವೆ. ಆದರೆ ಮೋದಿ ಇದುವರೆಗೆ ಭೇಟಿ ನೀಡಿಲ್ಲ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಪಹಲ್ಗಾಮ್ ಗೂ ಮೋದಿ ಭೇಟಿ ನೀಡಿಲ್ಲ. ಹೀಗಾಗಿ ಪ್ರಚಾರ ಸಿಗುವಲ್ಲಿ ಮಾತ್ರ ಮೋದಿ ಹೋಗ್ತಾರೆ ಎಂಬ ಆರೋಪದ ಬಗ್ಗೆ ಏನು ಹೇಳ್ತೀರಿ ಎಂದು ಪ್ರಲ್ಹಾದ್ ಜೋಶಿಗೆ ಪ್ರಶ್ನೆ ಕೇಳಲಾಯಿತು.

ಇದಕ್ಕೆ ಉತ್ತರಿಸಿದ ಅವರು ಇಡೀ ದೇಶದಲ್ಲಿ ಮೋದಿ ಪ್ರಧಾನಿ ಮಂತ್ರಿಯಾಗಿ ಎಷ್ಟು ಹೋಗಿದ್ದಾರೋ ಯಾವ ಪ್ರಧಾನಿಯೂ ಹೋಗಿಲ್ಲ. ಎಲ್ಲಿಗೆ ಯಾವಾಗ ಹೋಗಬೇಕು ಎಂಬ ಬಗ್ಗೆ ಒಂದು ಸ್ಟ್ರಾಟಜಿಕಲ್ ವ್ಯವಸ್ಥೆಯಿರುತ್ತದೆ. ಸರ್ಕಾರದ ಮಟ್ಟದಲ್ಲಿ ಏನೆಲ್ಲಾ ಮಾಡಬೇಕು ಅದನ್ನು ಮಾಡ್ತೀವಿ ನಾವು. ಮಣಿಪುರದಲ್ಲಿ ಏನು ಆಗ್ತಿದೆಯೋ ಅದು ದೌರ್ಭಾಗ್ಯ. ಪ್ರತಿ ಜೀವಕ್ಕೂ ಬೆಲೆಯಿದೆ.

ಈ ಹಿಂದೆ ಆಗಿದ್ದಾಗ ಯಾರು ಎಷ್ಟು ಹೋಗಿದ್ದರು ಎಲ್ಲಾ ನಾವು ನೋಡಿದ್ದೆವು. ಈ ಹಿಂದೆ ಪ್ರಧಾನ ಮಂತ್ರಿ ಬಿಡಿ, ಗೃಹಮಂತ್ರಿಯೂ ಹೋಗ್ತಿರಲಿಲ್ಲ’ ಎಂದು ಪ್ರಲ್ಹಾದ್ ಜೋಶಿ ಪ್ರತ್ಯುತ್ತರ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments