Webdunia - Bharat's app for daily news and videos

Install App

ಏನೂ ಮಾಡಿಲ್ಲ ಅಂದ್ರೆ ಡಿಸಿ ವರ್ಗಾವಣೆ ಮಾಡಿದ್ದು ಯಾಕೋ: ಸಿದ್ದರಾಮಯ್ಯಗೆ ಪ್ರಲ್ಹಾದ್ ಜೋಶಿ ಪ್ರಶ್ನೆ

Krishnaveni K
ಶನಿವಾರ, 6 ಜುಲೈ 2024 (14:21 IST)
ಬೆಂಗಳೂರು: ಮುಡಾ ಹಗರಣದಲ್ಲಿ ನಾನೇನು ಮಾಡಿಲ್ಲ, ನನ್ನದು ತಪ್ಪಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಈಗ ಹಗರಣ ಹೊರತಂದ ಡಿಸಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿರುವ ಉದ್ದೇಶವಾದರೂ ಏನು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದ ಬಗ್ಗೆ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. ಪ್ರಕರಣವನ್ನು ಸಿಬಿಐಗೊಪ್ಪಿಸಬೇಕು ಎಂದು ಒತ್ತಾಯ ಮಾಡುತ್ತಿದೆ.

ಈ ನಡುವೆ ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳ ಎತ್ತಂಗಡಿ ಮಾಡಿದ್ದು, ಆ ಪೈಕಿ ಮುಡಾ ಹಗರಣವನ್ನು ಬಯಲಿಗೆಳೆದ ಮೈಸೂರು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಕೂಡಾ ಸೇರಿದ್ದಾರೆ. ಈ ಪ್ರಕರಣ ಬಿಜೆಪಿ ಕಾಲದಲ್ಲಿ ನಡೆದಿದ್ದು ಎನ್ನುವುದು ಸಿದ್ದರಾಮಯ್ಯ ವಾದ.

ಇದಕ್ಕೆ ಟಾಂಗ್ ಕೊಟ್ಟಿರುವ ಪ್ರಲ್ಹಾದ್ ಜೋಶಿ ಎಲ್ಲವೂ ಬಿಜೆಪಿ ಕಾಲದಲ್ಲಿ ನಡೆದಿದ್ದು ಎನ್ನುವುದಾದರೆ ಡಿಸಿಯವರನ್ನು ವರ್ಗಾವಣೆ ಯಾಕೆ ಮಾಡಿದ್ರಿ? ಅವ್ಯವಹಾರ ನಡೆಯುತ್ತಿದೆ ಎಂದು ಡಿಸಿ ಪತ್ರ ಬರೆದಿದ್ದರು. ಅದರಲ್ಲಿ ಸಿದ್ದರಾಮಯ್ಯ ಮತ್ತು ಪುತ್ರನ ಹೆಸರೂ ಇದೆ. ಅದೇ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಏನೂ ಮಾಡಿಲ್ಲ ಎಂದಾದರೆ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಲಿ. ಒಂದೆಡೆ ವಾಲ್ಮೀಕಿ ಹಗರಣ, ಇನ್ನೊಂದೆಡೆ ಮುಡಾ ಹಗರಣ. ಒಟ್ಟಾರೆ ಸಿಎಂ ಸಿದ್ದರಾಮಯ್ಯನವರದ್ದು ಕಡು ಭ್ರಷ್ಟ ಸರ್ಕಾರ ಎಂದು ಅವರು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments