Webdunia - Bharat's app for daily news and videos

Install App

ಗೃಹಲಕ್ಷ್ಮಿ ಮಾತ್ರವಲ್ಲ ಅನ್ನ ಭಾಗ್ಯ ಹಣವೂ ಬಂದಿಲ್ಲ: ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ ಎಂದ ಪ್ರಲ್ಹಾದ್ ಜೋಶಿ

Krishnaveni K
ಸೋಮವಾರ, 17 ಫೆಬ್ರವರಿ 2025 (14:35 IST)
ಬೆಂಗಳೂರು: ಕರ್ನಾಟಕ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಣ ಮೂರು ತಿಂಗಳಿನಿಂದ ಬಾಕಿಯಿದೆ. ಅನ್ನಭಾಗ್ಯ ಯೋಜನೆಯ ಬಾಬ್ತು ಕೊಡಬೇಕಾದ ಹಣವೂ ಬಾಕಿಯಿದೆ. ರಾಜ್ಯ ಸರ್ಕಾರದ ಬಳಿ ಕೊಡಲು ಹಣವೇ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಮನೆ ಯಜಮಾನಿಯ ಖಾತೆಗೆ ಜಮಾ ಆಗಿಲ್ಲ. ಅನ್ನಭಾಗ್ಯ ಯೋಜನೆಯಡಿ ಕೊಡಬೇಕಾದ ಅಕ್ಕಿಯ ಹಣವನ್ನೂ ಸರ್ಕಾರ ನೀಡಿಲ್ಲ ಎಂದು ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಈ ಬಗ್ಗೆ ಮಾತನಾಡಿದ ಪ್ರಲ್ಹಾದ್ ಜೋಶಿ ಗೃಹಲಕ್ಷ್ಮಿ ಹಣ ಬಂದಿಲ್ಲ, ಅನ್ನಭಾಗ್ಯ ಹಣವೂ ಬಂದಿಲ್ಲ. ಕೇಂದ್ರ ಸರ್ಕಾರವೇ ಹೇಳಿದರೂ ರಾಜ್ಯ ಸರ್ಕಾರ ಅಕ್ಕಿ ಖರೀದಿಸ್ತಿಲ್ಲ. ಇದೀಗ ಅಕ್ಕಿಯೂ ಇಲ್ಲ, ಹಣವೂ ಇಲ್ಲ.  ನಮ್ಮ ಬಳಿ ಅಕ್ಕಿಯಿದೆ ಎಂದು ಜೂನ್ ನಲ್ಲೇ ಹೇಳಿದ್ದೆವು. ಮೊದಲು ಕೆ.ಜಿ.ಗೆ 34 ರೂ. ಇತ್ತು. ಈಗ 28 ರೂ.ಗೆ ಕೊಡುತ್ತೇವೆ ಎಂದರೂ ರಾಜ್ಯ ಸರ್ಕಾರ ಖರೀದಿಸ್ತಿಲ್ಲ. ಯಾಕೆಂದರೆ ರಾಜ್ಯ ಸರ್ಕಾರದ ಬಳಿ ದುಡ್ಡೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಇನ್ನು, ಮೆಟ್ರೊ ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ ಎನ್ನುತ್ತಾರೆ. ಟಿಕೆಟ್ ದರ ಕಡಿಮೆ ಮಾಡಿದರೆ ರಾಜ್ಯ ಸರ್ಕಾರದ ಕ್ರೆಡಿಟ್ ತೆಗೆದುಕೊಳ್ಳುತ್ತಾರೆ. ಅಂದರೆ ಹೆಚ್ಚಾದರೆ ನಾವು, ಕಡಿಮೆಯಾದರೆ ರಾಜ್ಯ ಸರ್ಕಾರ ಕಾರಣನಾ ಎಂದು ಅವರು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments