Webdunia - Bharat's app for daily news and videos

Install App

ವಾಲ್ಮೀಕಿ ನಿಗಮ ಹಗರಣದಲ್ಲಿ ಇ ತುಕರಾಂ, ವಕ್ಫ್ ಆಸ್ತಿ ಕಬಳಿಕೆಯಲ್ಲಿ ಕಾಂಗ್ರೆಸ್ ನಾಯಕರೇ ಭಾಗೀದಾರ: ಪ್ರಲ್ಹಾದ್ ಜೋಶಿ

Krishnaveni K
ಶುಕ್ರವಾರ, 8 ನವೆಂಬರ್ 2024 (12:27 IST)
ಬಳ್ಳಾರಿ: ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅನ್ನಪೂರ್ಣ ತುಕರಾಂ ಪತಿ ಸಂಸದ ಇ ತುಕರಾಂ ಬಗ್ಗೆ ಬಿಜೆಪಿ ಇಂದು ಪೋಸ್ಟರ್ ಹಿಡಿದು ವಾಗ್ದಾಳಿ ನಡೆಸಿದೆ.

ವಾಲ್ಮೀಕಿ ಹಗರಣದಲ್ಲಿ ಇ ತುಕರಾಂ ಕೂಡಾ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ‘ಇ ತುಕರಾಂ ಏನಿದ್ದಾರಲ್ಲ ಅವರು ವಾಲ್ಮೀಕಿ ನಿಗಮ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಆ ಅಕ್ರಮದಲ್ಲಿ ಅವರಿಗೂ ಹಣ ಹೋಗಿದೆ’ ಎಂದು ಜೋಶಿ ಹೇಳಿದ್ದಾರೆ.

ಇನ್ನು, ವಕ್ಫ್ ಆಸ್ತಿಯಲ್ಲಿ ಕೆಲವು ಕಾಂಗ್ರೆಸ್ ನಾಯಕರೇ ಆಸ್ತಿ ಹೊಡೆದಿದ್ದಾರೆ ಎಂದು ಜೋಶಿ ಆರೋಪ ಮಾಡಿದ್ದಾರೆ. ಈ ಸರ್ಕಾರ ತುಷ್ಠೀಕರಣದ ಪರಾಕಾಷ್ಟೆಯನ್ನು ತಲುಪಿದ್ದಾರೆ. ನಮ್ಮ ಬಗ್ಗೆ ಆರೋಪ ಮಾಡುತ್ತೀರಲ್ಲಾ? ನಮ್ಮ ಸರ್ಕಾರವಿದ್ದಾಗ ಯಾವುದೇ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಒತ್ತುವರಿ ಮಾಡಲು ಸೂಚಿಸಿದ್ದೆವಾ? ಎಂಥಾ ನಾನ್ ಸೆನ್ಸ್ ಮಾಡುತ್ತಿದ್ದೀರಿ?’ ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.

ಹಿಂದೂಗಳು ಜಾಗೃತರಾಗುತ್ತಾರೆ ಎಂದಾಗ ನೋಟಿಸ್ ವಾಪಸ್ ಪಡೆಯುವ ನಾಟಕ ಮಾಡಿದ್ರು ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಜಮೀರ್ ಅಹ್ಮದ್ ಅವರೇ ಹೇಳಿದ್ದಾರೆ, ಸಿಎಂ ಸಿದ್ದರಾಮಯ್ಯ ಆದೇಶದ ಮೇರೆಗೇ ನಾವು ಒತ್ತುವರಿ ಮಾಡುತ್ತಿದ್ದೇವೆ ಎಂದು. ಮುಡಾ ಹಗರಣದಲ್ಲಿ ಸ್ವತಃ ಹೈಕೋರ್ಟ್ ಹೇಳಿದೆ. ನಿಮ್ಮ ಪ್ರಭಾವವಿಲ್ಲದೇ ಅಕ್ರಮವಾಗಲು ಸಾಧ್ಯವಿಲ್ಲ ಎಂದಿದೆ. ಅಂದ ಮೇಲೆ ಸುಳ್ಳು ಕೇಸ್ ಹಾಕಿದೆ ಎಂದು ಬಿಜೆಪಿ ವಿರುದ್ಧ ಆರೋಪ ಮಾಡುತ್ತೀರಿ ಎಂದು. ಇದು ನಾವು ಹೇಳಿರೋದು ಅಲ್ಲ. ನಮ್ಮ ಮೇಲೆ ಸಿಬಿಐ, ಇಡಿ ಛೂ ಬಿಡುತ್ತೀರಿ ಎನ್ನುತ್ತೀರಿ. ಈ ಪ್ರಕರಣದಲ್ಲಿ ಸಿಬಿಐ ಎಲ್ಲಿ ಬಂತು? ಇಡಿ ಬಂದಿರೋದು ಮುಡಾದಲ್ಲಿ ಅಕ್ರಮ ಹಣ ವರ್ಗಾವಣೆ ವಿಚಾರಣೆ ಮಾಡಲು ಬಂದಿದೆ. ಆ ಇಡಿ ಬಂದಿರುವುದು ಹೈಕೋರ್ಟ್ ತೀರ್ಪು ಬಂದ ಮೇಲೆ’ ಎಂದು ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments