ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು

Webdunia
ಸೋಮವಾರ, 17 ಡಿಸೆಂಬರ್ 2018 (14:58 IST)
ಮೈಸೂರು : ಚಾಮರಾಜನಗರದ ಸುಳ್ವಾಡಿ ಮಾರಮ್ಮ ದೇಗುಲದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಘಟನೆಯ ಬಗ್ಗೆ ಉಡಾಫೆ ಉತ್ತರ ನೀಡಿದ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


ಆರೋಗ್ಯ ಸಚಿವ ಶಿವಾನಂದ ಪಾಟೀಲ್ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದವರನ್ನು  ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರ ಮುಂದೆ ‘ವಿಷ ಪ್ರಸಾದ ಘಟನೆ ಬಗ್ಗೆ ನನಗೆ ತಡವಾಗಿ ಗೋತ್ತಾಯ್ತು’ ಎಂದು  ಉಡಾಫೆ ಹೇಳಿಕೆ ಕೊಟ್ಟಿದ್ದರು. ಈ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು.


ಇದೀಗ  ಈ ಕುರಿತು ಸ್ಪಷ್ಟನೆ ನೀಡಿದ ಅವರು ,’ ನಾನು ಬಾಯಿ ತಪ್ಪಿ ನಿನ್ನೆ ಸಂಜೆ ನನಗೆ ವಿಷಯ ಗೊತ್ತಾಯ್ತು ಎಂದು ಹೇಳಿಕೆ ನೀಡಿದ್ದೆ, ನಂತರ ಅದನ್ನು ಸರಿಪಡಿಸಿಕೊಂಡೆ ವಿಷಯ ತಿಳಿದ ಕೂಡಲೇ ನಾನು ನನ್ನ ಇಲಾಖೆಯಿಂದ ಎಲ್ಲಾ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಪ್ರಾಥಮಿಕ, ತಾಲೂಕು ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆ ನೀಗಿಸಲು ಸರಕಾರ ಕ್ರಮವಹಿಸಿದ್ದು, ಕೆ.ಆರ್‌.ಆಸ್ಪತ್ರೆ ಮತ್ತು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments