Select Your Language

Notifications

webdunia
webdunia
webdunia
webdunia

ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದ ಪ್ರಕರಣ; ಘಟನೆ ಬಗ್ಗೆ ಡಿಸಿಎಂ ಪರಮೇಶ್ವರ್ ಸಂತಾಪ

ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದ ಪ್ರಕರಣ; ಘಟನೆ ಬಗ್ಗೆ ಡಿಸಿಎಂ ಪರಮೇಶ್ವರ್ ಸಂತಾಪ
ಬೆಂಗಳೂರು , ಶನಿವಾರ, 15 ಡಿಸೆಂಬರ್ 2018 (11:16 IST)
ಬೆಂಗಳೂರು : ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬಗ್ಗೆ ಡಿಸಿಎಂ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಪರಮೇಶ್ವರ್ ಅವರು,’ಮೃತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ವಿಷ ಹಾಕಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ನಾನು ಮತ್ತು ಸಿಎಂ ಕುಮಾರಸ್ವಾಮಿ ಆದೇಶ ಮಾಡಿದ್ದೇವೆ. ಸಿಎಂ ಮತ್ತು ಕೆಲ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸರ್ಕಾರದಿಂದ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇಂತಹ ಘಟನೆ ಮತ್ತೆ ಆಗದಂತೆ ಮುಜರಾಯಿ ಇಲಾಖೆಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.   


‘ಘಟನೆ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿದ್ದೇವೆ. ಯಾರೇ ತಪ್ಪು ಮಾಡಿದ್ರೂ ಅವ್ರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳತ್ತೇವೆ ಎಂದು ಡಿಸಿಎಂ ಪರಮೇಶ್ವರ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಾಜಪೇಯಿ ಸ್ಮರಣಾರ್ಥವಾಗಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ 100 ರೂಪಾಯಿ ನಾಣ್ಯ