ದೇಗುಲಗಳಲ್ಲಿ ಇಂದಿನಿಂದ ಪ್ರಸಾದ, ಸೇವೆಗಳು ಆರಂಭ

Webdunia
ಭಾನುವಾರ, 25 ಜುಲೈ 2021 (17:12 IST)
ಬೆಂಗಳೂರು (ಜು.25):  ಅನ್ಲಾಕ್ ಬಳಿಕ ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದ ದೇವಸ್ಥಾನಗಳಲ್ಲಿ ಇನ್ನು ಮುಂದೆ ಪ್ರಸಾದ ಮತ್ತು ವಿವಿಧ ಸೇವಾ ಕಾರ್ಯಗಳಿಗೂ ಅವಕಾಶ ನೀಡಲಾಗಿದೆ. ಭಾನುವಾರದಿಂದಲೇ ಭಕ್ತರು ಪುಣ್ಯ ಕ್ಷೇತ್ರಗಳಲ್ಲಿ ತಮ್ಮಿಷ್ಟದ ಸೇವೆಗಳನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಬಹುದು.

•ಅನ್ಲಾಕ್ ಬಳಿಕ ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದ ದೇವಸ್ಥಾನಗಳಲ್ಲಿ ಇನ್ನು ಮುಂದೆ ಪ್ರಸಾದ ಸೇವೆ
•ವಿವಿಧ ಸೇವಾ ಕಾರ್ಯಗಳಿಗೂ ಅವಕಾಶ ನೀಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಟ್ವೀಟ್ ಮಾಡಿದ್ದು ಜು.25ರಿಂದ ವಿವಿಧ ಸೇವೆಗಳು ಮತ್ತು ಪ್ರಸಾದ ವಿತರಣೆಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ ಮುಜರಾಯಿ ಇಲಾಖೆಯಿಂದ ಆದೇಶವೂ ಬಿಡುಗಡೆಯಾಗಿದೆ.
ಆಯ್ದ 100 ದೇಗುಲಗಳಲ್ಲಿ ಸಪ್ತಪದಿ ಯೋಜನೆ ಶೀಘ್ರ ಪುನಾರಂಭ
ಅನ್ಲಾಕ್ ಬಳಿಕ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತಾದರೂ, ಕೊರೋನಾ ಸೋಂಕಿನ ಮುನ್ನೆಚ್ಚರಿಕೆಯಿಂದಾಗಿ ವಿವಿಧ ಸೇವೆಗಳು ಮತ್ತು ಪ್ರಸಾದ ವಿತರಣೆಗೆ ಅನುಮತಿ ನೀಡಿರಲಿಲ್ಲ. ಇದರಿಂದಾಗಿ ಭಕ್ತರು ಪುಣ್ಯ ಕ್ಷೇತ್ರಗಳಿಗೆ ತೆರಳಿದ್ದರೂ ದೇವರ ದರ್ಶನಕ್ಕಷ್ಟೇ ತೃಪ್ತಿಪಟ್ಟುಕೊಳ್ಳಬೇಕಾಗಿತ್ತು.
ಧರ್ಮಸ್ಥಳ, ಕೊಲ್ಲೂರು, ಹೊರನಾಡು, ಶೃಂಗೇರಿ, ಯಡಿಯೂರು ಮತ್ತಿತರ ಶ್ರೀ ಕ್ಷೇತ್ರಗಳಲ್ಲಿ ನಡೆಯುತ್ತಿದ್ದ ಅನ್ನ ದಾಸೋಹಕ್ಕೆ ಇನ್ನು ಚಾಲನೆ ಸಿಗಲಿದೆ. ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಸರ್ಪದೋಷ ಪೂಜೆಗಳೂ ಪ್ರಾರಂಭವಾಗಲಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments