ಕೂಲ್ ಡ್ರಿಂಕ್ಸ್ ವ್ಯಾಪಾರಿ ನಷ್ಟ ಭರಿಸಿದ ಪ್ರತಾಪ್

Webdunia
ಮಂಗಳವಾರ, 2 ಮೇ 2023 (17:00 IST)
ಇತ್ತೀಚೆಗೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದಲ್ಲಿ ಭವ್ಯ ಸಾರ್ವಜನಿಕ ಸಮಾವೇಶ ನಡೆದಿತ್ತು. ಸಮಾವೇಶದ ಸಮೀಪ ಕೂಲ್ ಡ್ರಿಂಕ್ಸ್ ಮಾರಲು ಸಮೀರ್​​ ಎಂಬಾತ ಬಂದಿದ್ದ. ಸಮಾರಂಭದಲ್ಲಿ ಭಾಗವಹಿಸಿದ್ದ ಜನರು, ಈ ವಾಹನವನ್ನು ಬಿಜೆಪಿಯವರೇ ತರಿಸಿದ್ದಾರೆ. ಬೇಸಿಗೆಯ ಬಿಸಿಲಿನ ಧಗೆ, ಬಾಯಾರಿಕೆಯನ್ನು ನಿವಾರಿಸಿಕೊಳ್ಳಲು ಬಿಜೆಪಿಯವರೇ ಕಲ್ಪಿಸಿರುವ ವ್ಯವಸ್ಥೆಯಿದು ಎಂದು ತಿಳಿದು, ಎಲ್ಲರೂ ಗಾಡಿಗೆ ಮುತ್ತಿಗೆ ಹಾಕಿ, ಕೂಲ್ ಡ್ರಿಂಕ್ಸ್​​​ ಖಾಲಿ ಮಾಡಿದ್ರು. ಸುಮಾರು 35 ಸಾವಿರ ನಷ್ಟವನ್ನು ಅನುಭವಿಸಿದ ಸಮೀರ್ ಸಾಬ್​ ಕಣ್ಣೀರು ಹಾಕಿದ್ರು. ಈ ನಷ್ಟವನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ಭರಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಸಮೀರ್ ಹಸನ್ ಸಾಬ್​ಗೆ ಹಣ ಕಳುಹಿಸಿ ‘ಸಾರಿ ಬ್ರದರ್’ ಎಂದು ಕ್ಷಮೆಯಾಚಿಸಿ, ಧನ್ಯವಾದಗಳು ಎಂದು ಹೇಳಿದ್ದಾರೆ. ಅವರ ಈ ಕೆಲಸಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ಹರಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments