Webdunia - Bharat's app for daily news and videos

Install App

ಕೂಲ್ ಡ್ರಿಂಕ್ಸ್ ವ್ಯಾಪಾರಿ ನಷ್ಟ ಭರಿಸಿದ ಪ್ರತಾಪ್

Webdunia
ಮಂಗಳವಾರ, 2 ಮೇ 2023 (17:00 IST)
ಇತ್ತೀಚೆಗೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದಲ್ಲಿ ಭವ್ಯ ಸಾರ್ವಜನಿಕ ಸಮಾವೇಶ ನಡೆದಿತ್ತು. ಸಮಾವೇಶದ ಸಮೀಪ ಕೂಲ್ ಡ್ರಿಂಕ್ಸ್ ಮಾರಲು ಸಮೀರ್​​ ಎಂಬಾತ ಬಂದಿದ್ದ. ಸಮಾರಂಭದಲ್ಲಿ ಭಾಗವಹಿಸಿದ್ದ ಜನರು, ಈ ವಾಹನವನ್ನು ಬಿಜೆಪಿಯವರೇ ತರಿಸಿದ್ದಾರೆ. ಬೇಸಿಗೆಯ ಬಿಸಿಲಿನ ಧಗೆ, ಬಾಯಾರಿಕೆಯನ್ನು ನಿವಾರಿಸಿಕೊಳ್ಳಲು ಬಿಜೆಪಿಯವರೇ ಕಲ್ಪಿಸಿರುವ ವ್ಯವಸ್ಥೆಯಿದು ಎಂದು ತಿಳಿದು, ಎಲ್ಲರೂ ಗಾಡಿಗೆ ಮುತ್ತಿಗೆ ಹಾಕಿ, ಕೂಲ್ ಡ್ರಿಂಕ್ಸ್​​​ ಖಾಲಿ ಮಾಡಿದ್ರು. ಸುಮಾರು 35 ಸಾವಿರ ನಷ್ಟವನ್ನು ಅನುಭವಿಸಿದ ಸಮೀರ್ ಸಾಬ್​ ಕಣ್ಣೀರು ಹಾಕಿದ್ರು. ಈ ನಷ್ಟವನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ಭರಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಸಮೀರ್ ಹಸನ್ ಸಾಬ್​ಗೆ ಹಣ ಕಳುಹಿಸಿ ‘ಸಾರಿ ಬ್ರದರ್’ ಎಂದು ಕ್ಷಮೆಯಾಚಿಸಿ, ಧನ್ಯವಾದಗಳು ಎಂದು ಹೇಳಿದ್ದಾರೆ. ಅವರ ಈ ಕೆಲಸಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ಹರಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments