Publish Date: Tue, 17 May 2022 (20:02 IST)
Updated Date: Tue, 17 May 2022 (20:04 IST)
ರಾಜ್ಯ ಸರ್ಕಾರ ನಿನ್ನೆ ಕಮಲ್ ಪಂತ್ರನ್ನು ವರ್ಗಾವಣೆ ಮಾಡಿ ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿತ್ತು..ನಗರದ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಇಂದು ಪದಗ್ರಹಣ ಮಾಡಿದ್ದಾರೆ..ನಿರ್ಗಮಿತ ಕಮಿಷನರ್ ಕಮಲ್ ಪಂತ್ ಬ್ಯಾಟನ್ ನೀಡಿ ಆಲಿಂಗನ ಮಾಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.. ಈ ಮೂಲಕ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ಅಧಿಕಾರ ಸ್ವೀಕಾರ ಮಾಡಿದ್ರು.. ಈ ಹಿಂದೆ ಪ್ರತಾಪ್ ರೆಡ್ಡಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ರು..ಇನ್ನು, ನಿರ್ಗಮಿತ ಕಮಲ್ ಪಂತ್ಗೆ ಹಸ್ತಲಾಘವ ಮಾಡುವ ಮೂಲಕ ಬೀಳ್ಕೊಡುಗೆ ನೀಡಲಾಯ್ತು