Webdunia - Bharat's app for daily news and videos

Install App

ಪ್ರತಾಪ್ ಸಿಂಹಗೆ ಟಿಕೆಟ್ ನೀಡ್ಲೇಬೇಕು ಎಂದು ಪಟ್ಟು ಹಿಡಿದ ಫ್ಯಾನ್ಸ್

Krishnaveni K
ಶನಿವಾರ, 9 ಮಾರ್ಚ್ 2024 (16:50 IST)
Photo Courtesy: Twitter
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೈಸೂರಿನಿಂದ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ನಾಯಕರು ನಿರಾಕರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಅವರ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಾಪ್ ಸಿಂಹ ಪರ ಧ್ವನಿಯೆತ್ತಿದ್ದಾರೆ.

ಪ್ರತಾಪ್ ಸಿಂಹ ಮೈಸೂರಿನಿಂದ ಎರಡು ಬಾರಿ ಸಂಸದರಾಗಿ ಗೆದ್ದು ಬಂದಿದ್ದಾರೆ. ಆದರೆ ಈ ಬಾರಿ ಅವರಿಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಬದಲು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ಗೆ ಒತ್ತಡ ಹೇರುತ್ತಿದೆ.

ಇದು ಪ್ರತಾಪ್ ಸಿಂಹ ಅಭಿಮಾನಿಗಳನ್ನು ಕೆರಳಿಸಿದೆ. ಮೈಸೂರಿನಲ್ಲಿ ಸಂಸದರಾಗಿ ಯಾರ ಹಂಗೂ ಇಲ್ಲದೇ ತಮ್ಮ ಪಾಡಿಗೆ ತಾವು ಕೆಲಸ ಮಾಡಿಕೊಂಡು ಹೋಗಿದ್ದಕ್ಕೆ ಈ ಶಿಕ್ಷೆಯಾ ಎಂದು ಪ್ರಶ್ನಿಸಿದ್ದಾರೆ. ನೇರವಾಗಿ ಕೇಂದ್ರ ನಾಯಕರನ್ನು ಸಂಪರ್ಕಿಸಿ ತಮ್ಮ ಕ್ಷೇತ್ರದ ಕೆಲಸ ಮಾಡಿಸಿಕೊಳ್ಳುವ ಪ್ರತಾಪ್ ಸಿಂಹ ರಾಜ್ಯ ನಾಯಕರ ಕಾಲಿಗೆ ಬೀಳುತ್ತಿಲ್ಲ. ಹೊಂದಾಣಿಕೆ ರಾಜಕೀಯ ಮಾಡುತ್ತಿಲ್ಲ ಎಂದು ಈ ರೀತಿ ಮಾಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ಆದರೆ ತಮಗೆ ಟಿಕೆಟ್ ನಿರಾಕರಣೆ ಸುದ್ದಿ ಓಡಾಡುತ್ತಿದ್ದರೂ ಸಂಸದ ಪ್ರತಾಪ್ ಸಿಂಹ ಮೈಸೂರು-ಮನಮಧುರೈ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರಕ್ಕೆ ಕೇಂದ್ರದಿಂದ ಒಪ್ಪಿಗೆ ಪಡೆದುಕೊಂಡು ಬಂದಿದ್ದಾರೆ. ಇದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments