Webdunia - Bharat's app for daily news and videos

Install App

ಯಾರು ಏನೂ ಮಾಡಕ್ಕಾಗಲ್ಲ! ಪ್ರತಾಪ್ ಸಿಂಹರಿಗಿದೆ ಅಮಿತ್ ಶಾ ಬೆಂಬಲ

Krishnaveni K
ಸೋಮವಾರ, 11 ಮಾರ್ಚ್ 2024 (09:43 IST)
Photo Courtesy: Twitter
ಬೆಂಗಳೂರು: ಮೈಸೂರಿನಿಂದ ಈ ಬಾರಿ ಹಾಲಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ನೀಡಲ್ಲ ಎಂಬ ವರದಿಗಳು ಈಗ ಜೋರಾಗಿ ಹರಿದಾಡುತ್ತಿದೆ. ಇದು ಪ್ರತಾಪ್ ಸಿಂಹ ಅಭಿಮಾನಿಗಳನ್ನು ಕೆರಳಿಸಿದೆ.

ಬಿಜೆಪಿಯಲ್ಲಿ ಏನೂ ಕೆಲಸ ಮಾಡದೇ ಇದ್ದರೂ, ಬೇರೆ ಪಕ್ಷಕ್ಕೆ ಹೋಗಿ ಬಂದವರಿಗೂ ಕಾಡಿ ಬೇಡಿ ಪಕ್ಷಕ್ಕೆ ಕರೆತಂದು ಟಿಕೆಟ್ ನೀಡಿ ಸನ್ಮಾನ ಮಾಡಲಾಗುತ್ತಿದೆ. ಆದರೆ ತನಗೆ ಸಿಕ್ಕ ಅಧಿಕಾರಾವಧಿಯಲ್ಲಿ ಕ್ಷೇತ್ರದ ಪರ ಯಾರ ಹಂಗೂ ಇಲ್ಲದೇ ಕೆಲಸ ಮಾಡಿಕೊಂಡು, ಜನರ ಪ್ರೀತಿ ಗಳಿಸುವ ನಾಯಕನನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ ಕೇಳಿಬರುತ್ತಿದೆ.

ಪ್ರತಾಪ್ ಸಿಂಹಗೆ ಟಿಕೆಟ್ ನಿರಾಕರಣೆ ಅವರ ಅಭಿಮಾನಿ ಬಳಗದ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪನವರೇ ಪ್ರತಾಪ್ ಸಿಂಹಗೆ ಟಿಕೆಟ್ ನೀಡದಂತೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆದರೆ ಪ್ರತಾಪ್ ಸಿಂಹಗೆ ರಾಜ್ಯ ನಾಯಕರ ಜೊತೆಗೆ ಮೊದಲಿನಿಂದಲೂ ಸಂಬಂಧ ಅಷ್ಟಕ್ಕಷ್ಟೇ. ಆದರೆ ಕೇಂದ್ರ ನಾಯಕರ ಗಮನ ಸೆಳೆಯಲು ಅವರು ಯಶಸ್ವಿಯಾಗಿದ್ದರು. ಹೀಗಾಗಿ ಪ್ರತಾಪ್ ಸಿಂಹರನ್ನು ಕೈ ಬಿಡಲು ಸ್ವತಃ ಅಮಿತ್ ಶಾಗೇ ಇಷ್ಟವಿಲ್ಲ ಎನ್ನಲಾಗುತ್ತಿದೆ. ಪ್ರತಾಪ್ ಸಿಂಹಗೆ ಟಿಕೆಟ್ ನೀಡದೇ ಇರಲು ಸ್ವತಃ ಅಮಿತ್ ಶಾ ಅವರಿಗೇ ಸಹಮತವಿಲ್ಲ ಎನ್ನಲಾಗಿದೆ. ಹೈಕಮಾಂಡ್ ಗೇ ಈ ವಿಚಾರದಲ್ಲಿ ಒಪ್ಪಿಗೆಯಿಲ್ಲದ ಮೇಲೆ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುವ ಪ್ರಶ್ನೆಯೇ ಇಲ್ಲ ಎಂಬುದು ಅವರ ಬೆಂಬಲಿಗರ ವಾದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments