Webdunia - Bharat's app for daily news and videos

Install App

ಮೈಸೂರಂದ್ರೆ ಮಹಾರಾಜರು ನೆನಪಾಗ್ತಿದ್ದರು, ಈಗ ಟಿಪ್ಪು ಸಂತತಿ ತುಂಬಿದೆ: ಪ್ರತಾಪ್ ಸಿಂಹ

Webdunia
ಬುಧವಾರ, 8 ನವೆಂಬರ್ 2017 (10:00 IST)
ದಾವಣಗೆರೆ: ಕರಾವಳಿ ಎಂದರೆ ರಾಣಿ ಅಬ್ಬಕ್ಕ ನೆನಪಾಗುತ್ತಿದ್ದರು, ಈಗ ಯಾಸಿನ್, ರಿಯಾಜ್ ಭಟ್ಕಳ್ ನೆನಪಾಗ್ತಾರೆ. ಮೈಸೂರು ಎಂದರೆ ಮಹಾರಾಜರು ನೆನಪಾಗ್ತಿದ್ದರು. ಆದ್ರೀಗ ಟಿಪ್ಪು ಸಂತತಿಯವರು ತುಂಬಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದಿಂದ ಪೊಲೀಸ್ ಇಲಾಖೆಯನ್ನ ದುರ್ಬಳಕೆ ಮಾಡಿಕೊಂಡಿದೆ. ಸರ್ಕಾರದ ನಿರ್ಲಕ್ಷ್ಯದಿಂದ ಪೊಲೀಸ್ ಅಧಿಕಾರಿಗಳು ಸಾವಿಗೆ ಶರಣಾಗಿದ್ದಾರೆ. ಪೋಲೀಸ್ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದೆ ಎಂದರು.

ಕರಾವಳಿ ಎಂದರೆ ಮೊದಲು ರಾಣಿ ಅಬ್ಬಕ್ಕ ನೆನಪಾಗುತ್ತಿದ್ದರು. ಈಗ ಯಾಸಿನ್, ರಿಯಾಜ್ ಭಟ್ಕಳ್ ನೆನಪಾಗ್ತಾರೆ. ಮೈಸೂರು ಎಂದರೆ ಮಹಾರಾಜರು ನೆನಪಾಗ್ತಿದ್ದರು. ಆದರೆ ಈಗ ಟಿಪ್ಪು ಸಂತತಿಯವರು ತುಂಬಿದ್ದಾರೆ. ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಮೂಲಕ ಲಾಡೆನ್ ಹಾಗೂ ಉಲ್ ಉಮರ್ ಸಂತತಿ ಹೆಚ್ಚು ಮಾಡಲು ಹೊರಟಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಒಬ್ಬ ಸಭ್ಯ ರಾಜಕಾರಣಿ ಎಂದು ಹೊಗಳಿದ ಸಿಂಹ, ದಲಿತರನ್ನು ಸಿಎಂ ಮಾಡಲು ಕಾಂಗ್ರೆಸ್ ನಿಂದ ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ರಾಜಕೀಯ ಕುತಂತ್ರಕ್ಕೆ ದಲಿತರು ತತ್ತರಿಸಿದ್ದಾರೆ. ಹೀಗಾಗಿ ಪರಮೇಶ್ವರ್ ಬೇಸರದ ಹೇಳಿಕೆ ನಿಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments