Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಿಂದ ಕೇಂದ್ರ ಯೋಜನೆಗಳು ಹೈಜಾಕ್: ಪ್ರತಾಪ್ ಸಿಂಹ

Webdunia
ಶುಕ್ರವಾರ, 14 ಜುಲೈ 2017 (15:29 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ಯೋಜನೆಗಳನ್ನು ಹೈಜಾಕ್ ಮಾಡಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
 
ಕೇಂದ್ರದ ಹಣದಲ್ಲಿ ಸಿಎಂ ಜಾತ್ರೆ ಮಾಡುತ್ತಿದ್ದಾರೆ. ಕೇಂದ್ರದ ಯೋಜನೆಗಳ ಅನುಷ್ಠಾನ ಬಗ್ಗೆ ರಾಜ್ಯ ಸರಕಾರ ನನಗೆ ಮಾಹಿತಿ ನೀಡುತ್ತಿಲ್ಲ. ಇಂದು ಕೇಂದ್ರ ಸರಕಾರದ ಯೋಜನೆ ಅನುಷ್ಠಾನ ಕುರಿತಂತೆ ಒಂದು ಗಂಟೆ ಹಿಂದೆ ಕಾರ್ಯಕ್ರಮದ ಮಾಹಿತಿ ಲಭಿಸಿದೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. 
 
ಮುಖ್ಯಮಂತ್ರಿಗಳೇ ನಿಮ್ಮ ಮೆಚ್ಯೂರಿಟಿ ಪಾಠ ನನಗೆ ಬೇಕಾಗಿಲ್ಲ. ನಿಮ್ಮ ಪುತ್ರ ಡಾ,ಯತೀಂದ್ರ ಯಾವುದೇ ಸಾಂವಿಧಾನಿಕ ಹುದ್ದೆ ಇಲ್ಲದಿದ್ದರೂ ಅಧಿಕಾರಿಗಳ ಸಭೆ ಕರಿತಾರೆ. ಅವರಿಗೆ ನೀವು ಮೆಚ್ಯೂರಿಟಿ ಪಾಠ ಹೇಳಿಕೊಡಿ ಎಂದು ತಿರುಗೇಟು ನೀಡಿದ್ದಾರೆ. 
 
ಕೇಂದ್ರ ಸರಕಾರದ ಹೊಸಬೆಳಕು ಯೋಜನೆಯಡಿ ಮೈಸೂರಿನ ಸುತ್ತಮುತ್ತಲಿರುವ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯನವರೇ ಮಾಡಿದ್ದಾರೆ. ಕಾರ್ಯಕ್ರಮದ ಬಗ್ಗೆ ನನಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments