Webdunia - Bharat's app for daily news and videos

Install App

ಜಾರ್ಜ್ ಅವರೇ ನಿಮಗೆ ಸ್ಯಾಲರಿ ಬರಲ್ವಾ: ಪ್ರತಾಪ್ ಸಿಂಹ ಟಾಂಗ್

Krishnaveni K
ಗುರುವಾರ, 20 ಫೆಬ್ರವರಿ 2025 (16:29 IST)
ಬೆಂಗಳೂರು: ಗೃಹಲಕ್ಷ್ಮಿ ಹಣ ಬರ್ತಿಲ್ಲ ಎನ್ನಲು ಅದೇನು ಸಂಬಳವಾ ಎಂದಿದ್ದ ಕೆಜೆ ಜಾರ್ಜ್ ಗೆ ಇಂದು ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ನಿಮಗೆ ತಿಂಗಳ ಸ್ಯಾಲರಿ ಬರಲ್ವಾ ಎಂದು ಟಾಂಗ್ ಕೊಟ್ಟಿದ್ದಾರೆ.

ಗೃಹಲಕ್ಷ್ಮಿ ಹಣ ಕಳೆದ ಮೂರು ತಿಂಗಳಿನಿಂದ ಬಂದಿಲ್ಲ.  ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಚಿವ ಕೆಜೆ ಜಾರ್ಜ್ ತಿಂಗಳು ತಿಂಗಳು ಬರಕ್ಕೆ ಅದೇನು ಸಂಬಳವಾ ಎಂದು ಉಡಾಫೆಯಿಂದ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಇಂದು ಮಾಜಿ ಸಂಸದ, ಬಿಜೆಪಿ ನಾಯಕ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರತೀ ತಿಂಗಳು ಹಣ ಹಾಕ್ತೀವಿ ಎಂದು ಹೇಳಿಕೊಂಡು ಅಲ್ವಾ ನೀವು ಅಧಿಕಾರಕ್ಕೆ ಬಂದಿದ್ದು. ಪ್ರತೀ ಬಾರಿ ಚುನಾವಣೆ ನಡೆಯುವಾಗ ಕರೆಕ್ಟ್ ಆಗಿ ಹಣ ಹಾಕ್ತೀರಿ. ನಿರಂತರವಾಗಿ ನಡೆಯುವ ಯೋಜನೆಗಳಿಗೆ ಚುನಾವಣಾ ನೀತಿ ಸಂಹಿತ ಅನ್ವಯವಾಗಲ್ಲ ಎಂಬುದನ್ನೇ ದಾಳ ಮಾಡಿಕೊಂಡು ಹಣ ಹಾಕಿ ಮತ ಸೆಳೆಯುತ್ತೀರಿ.

ಈಗಲೂ ಕರೆಕ್ಟ್ ಆಗಿ ಹಣ ಹಾಕಿ. ನೀವು ಹಾಕ್ತೀರಿ ಎಂದು ಭರವಸೆ ನೀಡಿ ಅಲ್ವಾ ಅಧಿಕಾರಕ್ಕೆ ಬಂದಿದ್ದು. ಸಚಿವ ಜಾರ್ಜ್ ಅವರೇ ನಿಮಗೆ ಪ್ರತೀ ತಿಂಗಳು ಸಂಬಳ ಬರಲ್ವಾ? ಜನರಿಗೂ ಕೊಟ್ಟ ಮಾತಿನಂತೆ ತಿಂಗಳು ತಿಂಗಳು ಹಣ ಕೊಡಿ’ ಎಂದು ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments