Webdunia - Bharat's app for daily news and videos

Install App

ಅಯೂಬ್ ಗೆ ಪದ್ಮಶ್ರೀ ಪುರಸ್ಕಾರ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ವಿನಂತಿ..!

Webdunia
ಶನಿವಾರ, 17 ಸೆಪ್ಟಂಬರ್ 2022 (21:14 IST)
ಅನಾಥ ಶವಗಳ ಅಂತ್ಯಸಂಸ್ಕಾರದ ಮೂಲಕ ಸಮಾಜಕ್ಕೆ ಆದ ರೀತಿಯಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಮೈಸೂರಿನ ಅಯೂಬ್ ಅಹ್ಮದ್ ಅವರಿಗೆ 2023 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ನೀಡುವ ಮೂಲಕ ಗೌರವಿಸಬೇಕು ಎಂದು ಸಂಸದ ಪ್ರತಾಪ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ವಿನಂತಿಸಿದ್ದಾರೆ. 
 
ಮೈಸೂರಿನ ಎನ್.ಆರ್.ಮೊಹಲ್ಲಾ ಎ.ಜೆ.ಬ್ಲಾಕ್ ನಿವಾಸಿಯಾಗಿರುವ ಅಯೂಬ್, ಕಳೆದ 23 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಮೆರಿಕದ ಹಾರ್ಮೊನಿ ಇನ್​ಸ್ಟಿಟ್ಯೂಟ್ ಅಯೂಬ್ ಅವರಿಗೆ ಈಗಾಗಲೇ ಡಾಕ್ಟರೇಟ್ ನೀಡಿ ಗೌರವಿಸಿದೆ. ಎ.ಪಿ.ಜೆ.ಅಬ್ದುಲ್ ಕಲಾಂ ಗ್ಲೋಬಲ್ ಪೀಸ್ ಅವಾರ್ಡ್, 2017ರ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯೂ ಅಯೂಬ್ ಅವರಿಗೆ ಲಭಿಸಿದೆ. ಅವರು ಈವರೆಗೆ 16 ಸಾವಿರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಕೊವಿಡ್ ಸಂಧರ್ಭದಲ್ಲೂ ಅನಾಥ ಶವನಗಳ ಅಂತ್ಯಕ್ರಿಯೆ ಮಾಡುವ ತಮ್ಮ ಸೇವೆಯಿಂದ ಹಿಂದೆ ಸರಿಯಲಿಲ್ಲ. ಅನಾಥ ಶವ ಸಂಸ್ಕಾರದ ಜೊತೆಗೆ ಟೈಲರಿಂಗ್ ಸಂಸ್ಥೆ ತೆರೆದು ಬಡ ಜನತೆಗೆ ಉಚಿತ ಹೊಲಿಗೆ ತರಬೇತಿಯನ್ನೂ ನೀಡುತ್ತಿದ್ದಾರೆ.
 
ಅಯೂಬ್ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಬೇಕೆಂದು ವಿನಂತಿಸಿ ಪ್ರತಾಪ್ ಸಿಂಹ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಅಯೂಬ್ ಅವರು ಕಳೆದ 20 ವರ್ಷಗಳಿಂದ ಭಿಕ್ಷುಕರಿಗೆ ಉಚಿತ ಆಹಾರ ನೀಡುವುದರ ಜೊತೆಗೆ ಜನಾಬ್ ಬಶೀರ್ ವೃದ್ಧಾಶ್ರಮದ ಮೂಲಕ ಬಡ ವೃದ್ಧರನ್ನು ಸಲಹುತ್ತಿದ್ದಾರೆ. ವೃತ್ತಿಯಲ್ಲಿ ಅವರು ಮಂಡಿ ಮೊಹಲ್ಲಾದಲ್ಲಿ ಲೋಡರ್ ಆಗಿದ್ದಾರೆ. ತಮ್ಮ ಸ್ವಂತ ಕಾರಿನಲ್ಲಿಯೇ ಶವಗಳನ್ನು ಸಾಗಿಸುತ್ತಾರೆ. ಹಲವು ಆಸ್ಪತ್ರೆಗಳು ಮತ್ತು ಸಾರ್ವಜನಿಕರಿಂದ ಅನಾಥ ಶವಗಳ ಬಗ್ಗೆ ಅಯೂಬ್ ಅವರಿಗೆ ಫೋನ್ ಕರೆಗಳು ಬರುತ್ತವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಶ್ವಾಸಕೋಶ ಸಮಸ್ಯೆಯಿರುವವರಿಗೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ

ಬಾಲಕಿಯ ಸಾವು ನನ್ನ ಮನಸ್ಸು ಕಲಕಿದೆ: ಎಚ್‌ಡಿ ಕುಮಾರಸ್ವಾಮಿ

COVID19: ಲಾಕ್ ಡೌನ್ ಬರುತ್ತಾ, ಶಾಲೆಗೆ ರಜೆ ಇರುತ್ತಾ: ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಏನಾಯ್ತು

Mangalore: ಇದು ಹೊಳೆ ಅಲ್ಲ ಪಂಪ್ ವೆಲ್ ಮಾರಾಯ್ರೆ.. ವೈರಲ್ ವಿಡಿಯೋ ನೋಡಿ

ದೇಶವನ್ನೇ ಕಂಟ್ರೋಲ್ ಮಾಡುವ ಫ್ರೆಂಚ್‌ ಅಧ್ಯಕ್ಷನಿಗೂ ಬಿಡದ ಪತ್ನಿಯ ಕಾಟ, Viral Video

ಮುಂದಿನ ಸುದ್ದಿ
Show comments