Webdunia - Bharat's app for daily news and videos

Install App

ವಿ.ಸೋಮಣ್ಣ ಬೈಗುಳಕ್ಕೆ ಹೇರ್ ಸ್ಟೈಲ್ ಚೇಂಜ್ ಮಾಡಿದ ಪ್ರತಾಪ್ ಸಿಂಹ

Sampriya
ಶುಕ್ರವಾರ, 11 ಅಕ್ಟೋಬರ್ 2024 (17:28 IST)
Photo Courtesy X
ಮೈಸೂರು: ಸಂಸದ ಸ್ಥಾನದಿಂದ ಕೆಳಗಿಳಿದರು ಪ್ರತಾಪ್ ಸಿಂಹ ಮಾತ್ರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ, ರಾಜಕೀಯ ಆಗು ಹೋಗುಗಳ ಬಗ್ಗೆ ಪ್ರತಿಕ್ರಿಯಿಸುತ್ತಾ ಆಕ್ಟೀವ್ ಆಗಿದ್ದಾರೆ. ದೇಶದ ಬೆಳವಣಿಗೆ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿರುತ್ತಾರೆ.

ಸಂಸದ ಸ್ಥಾನದಿಂದ ಕೆಳಗಿಳಿದ ಬಳಿಕ ಪ್ರತಾಪ್ ಸಿಂಹ ಅವರು ಉದ್ದ ಕೂದಲು, ಗಡ್ಡದೊಂದಿಗೆ ನ್ಯೂ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಪ್ರತಾಪ್ ಸಿಂಹ ಅವರು ಸ್ನೇಹಿತರ ಹಾಗೂ ರಾಜಕೀಯದ ಕಾರ್ಯಕ್ರಮಗಳಲ್ಲಿ  ಭಾಗವಹಿಸುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಅಕ್ಟೋಬರ್ 7ರಂದು ಪ್ರತಾಪ್ ಸಿಂಹ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೊಸ ಹೇರ್‌ ಸ್ಟೈಲ್ ಲುಕ್‌ನ ಫೋಟೋವನ್ನು ಹಂಚಿಕೊಂಡಿದ್ದರು. ಅದರಲ್ಲಿ ಪ್ರತಪ್ ಸಿಂಹ ಅವರು ಉದ್ದ ಕೂದಲಿನಲ್ಲಿ ಪೋಸ್ ನೀಡಿದ್ದರು. ಇದೀಗ ದಿಢೀರನೇ ಈ ಹೇರ್‌ ಸ್ಟೈಲ್‌ ಅನ್ನು ಚೇಂಜ್ ಮಾಡಿದ್ದಾರೆ. ಅದಕ್ಕೆ ಕಾರಣ ಯಾರೆಂಬುದನ್ನು ಕೂಡಾ ಅವರು ಹೇಳಿಕೊಂಡಿದ್ದಾರೆ.

ಕೇಂದ್ರ ಸಚಿವರು ಹಾಗೂ ಹಿರಿಯಣ್ಣನಂತೆ ನನ್ನನ್ನು ಸಲುಹುವ ವಿ. ಸೋಮಣ್ಣ  ಸಾಹೇಬರ  ಗದರಿಕೆಗೆ ಅಂಜಿ ಹೇರ್ ಕಟ್ ಮಾಡಿಸಿದ್ದೇನೆ ಮತ್ತು ನಿಮ್ಮ ಬೈಗುಳದಿಂದಲೂ ತಪ್ಪಿಸಿಕೊಳ್ಳುತಿದ್ದೇನೆ ಎಂದು ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ ನ್ಯೂ ಹೇರ್‌ ಕಟ್‌ನಲ್ಲಿ ಪೋಟೋ ಹಂಚಿ ಬರೆದುಕೊಂಡಿದ್ದಾರೆ.

ಅದಕ್ಕೆ ವಿ ಸೋಮಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಸಲಹೆ ಸ್ವೀಕರಿಸಿದ್ದಕ್ಕೆ ಧನ್ಯವಾದಗಳು. ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಪ್ರತಾಪ್ ಸಿಂಹಗೆ ಹಾರೈಸಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments