Webdunia - Bharat's app for daily news and videos

Install App

ಮುಂದುವರಿದ ಸುಮಲತಾ-ಪ್ರತಾಪ್ ಸಿಂಹ ಟಾಂಗ್ ಪ್ರತಿ ಟಾಂಗ್

Webdunia
ಬುಧವಾರ, 18 ನವೆಂಬರ್ 2020 (11:36 IST)
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಮೈಸೂರು ಸಂಸದ ಪ್ರತಾಪ್ ಸಿಂಹ ನಡುವಿನ ವಾಕ್ಸಮರ ಮುಂದುವರಿದಿದೆ.


ಮೊದಲಿಗೆ ಪ್ರತಾಪ್ ಸಿಂಹ ಸುಮಲತಾ ಬಗ್ಗೆ ಅವರು ಏನೂ ಕೆಲಸ ಮಾಡಲ್ಲ ಎಂದು ಮಾತನಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು ಎಲ್ಲಾ ವಿವಾದಕ್ಕೆ ಕಾರಣವಾಯಿತು. ಇದಾದ ಬಳಿಕ ಸುಮಲತಾ ಕೂಡಾ ಪ್ರತಾಪ್ ವಿರುದ್ಧ ಟ್ವಿಟರ್ ಮೂಲಕ ಪುರಂದರ ದಾಸರ ಆಚಾರವಿಲ್ಲದ ನಾಲಿಗೆ ಸಾಲುಗಳನ್ನು ಬರೆದು ಪ್ರತಿ ಟಾಂಗ್ ಕೊಟ್ಟಿದ್ದರು. ಅಲ್ಲದೆ, ಅಂಬರೀಶ್ ಇದ್ದಾಗ ಈ ರೀತಿ ಮಾತನಾಡಲು ಯಾರಿಗೂ ಧೈರ್ಯವಿರಲಿಲ್ಲ ಎಂದಿದ್ದರು. ಇದಕ್ಕೀಗ ಪ್ರತಾಪ್ ಸಿಂಹ ಕೂಡಾ ತಿರುಗೇಟು ಕೊಟ್ಟಿದ್ದಾರೆ. ‘ನಾವು ಯಾರೂ ಪಾಳೆಗಾರಿಕೆ ಮಾಡಲು ಬಂದಿಲ್ಲ. ನನಗೆ ಯಾವುದೇ ಬ್ಯಾಕ್ ಗ್ರೌಂಡ್ ಇಲ್ಲ. ಸ್ವಂತ ಪರಿಶ್ರಮದಿಂದ ಮೇಲೆ ಬಂದಿದ್ದೇನೆ. ನನ್ನ ಕೆಲಸವೇ ನನಗೆ ಶ್ರೀರಕ್ಷೆ. ಮಂಡ್ಯ, ಮೈಸೂರು, ಬೆಂಗಳೂರಿನ ಜನರಿಗೆ ನೆರವಾಗಲು 10 ಪಥದ ರಾಷ್ಟ್ರೀಯ ಹೆದ್ದಾರಿಯನ್ನು ಆದಷ್ಟು ಬೇಗ ಪೂರ್ತಿ ಮಾಡಬೇಕು ಎಂಬುದಷ್ಟೇ ಉದ್ದೇಶ. ಅದಕ್ಕಾಗಿ ಸತತವಾಗಿ ಕೆಲಸ ಮಾಡುತ್ತಿದ್ದೇನೆ’ ಎಂದು ಮಾಧ‍್ಯಮಗಳ ಮುಂದೆ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments