Webdunia - Bharat's app for daily news and videos

Install App

ಮಳೆಗಾಗಿ ಪ್ರಾರ್ಥಿಸಿ ಮದುವೆ ಮಾಡಿದ್ರು…

Webdunia
ಶುಕ್ರವಾರ, 20 ಜುಲೈ 2018 (16:07 IST)
ರಾಜ್ಯದ ವಿವಿಧೆಡೆ ಮಳೆಯು ಸುರಿಯುತ್ತಿದೆ. ಹಲವೆಡೆ ಭಾರಿ ಅನಾಹುತ ಆಗುವಂತೆ ಮಳೆರಾಯ ತನ್ನ ಆರ್ಭಟ ತೋರುತ್ತಿದ್ದಾನೆ. ಕೆಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಆದರೆ ಆ ಜಿಲ್ಲೆಯಲ್ಲಿ ಮಳೆರಾಯ ಮುನಿಸಿಕೊಂಡಿದ್ದಾನೆ. ಹೀಗಾಗಿ ಮಳೆಗಾಗಿ ಪ್ರಾರ್ಥಿಸಿ ಆ ಊರಿನ ಗ್ರಾಮಸ್ಥರು ಮದುವೆ ಮಾಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ಮಾತ್ರ ಮಳೆಯ ಸಿಂಚನವಿಲ್ಲ. ಇದರಿಂದ ವರುಣದೇವ ಮುನಿಸಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಕತ್ತೆಗಳಿಗೆ ಮದುವೆ ಮಾಡಿದ್ದಾರೆ. ಹೀಗೆ ಮಾಡುವುದರಿಂದ ಮಳೆ ಬರುತ್ತದೆ ಎಂದು ನಂಬಿ ಕತ್ತೆಗಳಿಗೆ ಮೆರವಣಿಗೆ ಮಾಡಿದ್ದಾರೆ.

ಗ್ರಾಮದಲ್ಲಿ ಮಳೆ ಇಲ್ಲದ್ದರಿಂದ ರೈತರು ಪರಿತಪಿಸುವಂತಾಗಿದೆ. ಕೈ ಬಂದ ಫಸಲು ಸಹ ಮಳೆ ಇಲ್ಲದೆ ಒಣಗುತ್ತಿದೆ. ಆದಷ್ಟು ಬೇಗ ಮಳೆ ಬಂದರೆ ರೈತರಿಗೆ ಉಳಿಗಾಲ ಎನ್ನುವ ಮಾತು ಮಳೆಯನ್ನೆ ನಂಬಿರುವ ರೈತರದ್ದಾಗಿದೆ. ಹೀಗಾಗಿ ವರುಣ ದೇವನಿಗಾಗಿ ಪ್ರಾರ್ಥಿಸಿ ಕತ್ತೆಗಳ ಮದುವೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments