ಏಪ್ರಿಲ್ 10 ರಿಂದ 18+ ವಯಸ್ಸಿನವರಿಗೆ ಮುನ್ನೆಚ್ಚರಿಕೆ ಡೋಸ್

Webdunia
ಶನಿವಾರ, 9 ಏಪ್ರಿಲ್ 2022 (18:32 IST)
ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯವಾಗಿಸಿದೆ. ಇದು ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು, ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
 
ರಾಜ್ಯದಲಿ 18 ವರ್ಷ ಮೇಲ್ಪಟ್ಟವರು ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು. 18 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣವಾಗಿದ್ದಲ್ಲಿ, ಈ ಡೋಸ್ ಪಡೆಯಬಹುದು ಎಂದು ಸಚಿವರು ತಿಳಿಸಿದ್ದಾರೆ.
 
ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ರೋಗ ಪೂರ್ವ ನಿಯಂತ್ರಣ ಕ್ರಮಗಳಿಗೆ ಹೆಚ್ಚು ಒತ್ತು ನೀಡಿದೆ. ಇದೇ ರೀತಿ ಕೋವಿಡ್ ಲಸಿಕಾಕರಣಕ್ಕೂ ವೇಗ ನೀಡಿದ್ದು, ದೇಶದಲ್ಲಿ ಈವರೆಗೆ 185 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ಲಸಿಕಾಕರಣವನ್ನು ಚುರುಕುಗೊಳಿಸಿರುವುದರಿಂದ, ಈವರೆಗೆ 10.47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದರ ಜೊತೆಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 60+ ವಯಸ್ಸಿನ ನಾಗರಿಕರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.
 
ರಾಜ್ಯದಲ್ಲಿ ಈವರೆಗೆ, 12-14 ವಯೋಮಾನದವರಿಗೆ 13,27,985 ಮೊದಲ ಡೋಸ್ (65.6%), 15-17 ವಯೋಮಾನದವರಿಗೆ 25,09,276 ಮೊದಲ ಡೋಸ್ (79%) ಹಾಗೂ 20,48,576 ಎರಡನೇ ಡೋಸ್ (64.5%) ನೀಡಲಾಗಿದೆ. ಈವರೆಗೆ 15+ ವಯೋಮಾನದವರಿಗೆ 5,23,05,424 ಮೊದಲ ಡೋಸ್ (100.4%) ಹಾಗೂ 4,97,08,909 ಎರಡನೇ ಡೋಸ್ (95.4%) ನೀಡಲಾಗಿದೆ. 18+ ವಯೋಮಾನದವರಿಗೆ 4,97,96,148 ಮೊದಲ ಡೋಸ್ (101.8%) ಹಾಗೂ 4,76,60,333 ಎರಡನೇ ಡೋಸ್ (97.4%) ನೀಡಲಾಗಿದೆ. ಈವರೆಗೆ 14,24,433 (57.6%) ಮುನ್ನೆಚ್ಚರಿಕೆ ಲಸಿಕೆ ಡೋಸ್ ನೀಡಲಾಗಿದೆ. ಈ ಮೂಲಕ ರಾಜ್ಯವು ಲಸಿಕಾಕರಣದಲ್ಲಿ ಶ್ಲಾಘನೀಯ ಪ್ರಗತಿ ಸಾಧಿಸುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
 
ಕೇಂದ್ರ ಸರ್ಕಾರ ಮಾಡಿಕೊಟ್ಟ ಈ ಅವಕಾಶವನ್ನು ಎಲ್ಲರೂ ತಪ್ಪದೇ ಬಳಸಿಕೊಂಡು ಮುನ್ನೆಚ್ಚರಿಕೆ ಲಸಿಕೆ ಪಡೆಯಬೇಕು. ಎರಡು ಡೋಸ್‍ಗಳಂತೆ ಮುನ್ನೆಚ್ಚರಿಕೆ ಡೋಸ್ ಕೂಡ ಅಗತ್ಯ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ಜೊತೆಗೆ ಕೋವಿಡ್ ಸುರಕ್ಷತಾ ಕ್ರಮಗಳನ್ನೂ ಪಾಲಿಸಬೇಕು ಎಂದು ಸಚಿವರು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments