Select Your Language

Notifications

webdunia
webdunia
webdunia
webdunia

ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ : ಅಲೋಕ್ ಕುಮಾರ್

ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ : ಅಲೋಕ್ ಕುಮಾರ್
ಬೆಳಗಾವಿ , ಶನಿವಾರ, 28 ಜನವರಿ 2023 (07:15 IST)
ಬೆಳಗಾವಿ : ಜಿಲ್ಲೆಗೆ ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಯಾವುದೇ ಅಹಿತಕರ ಘಟನೆ ಆಗಬಾರದು ಅಂತಾ ವ್ಯವಸ್ಥೆ ಮಾಡಿದ್ದೇವೆ. ಅದೇ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ನಿರ್ದೇಶನ ಕೊಟ್ಟಿದ್ದೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.28 ರಂದು ಅಮಿತ್ ಶಾ ನಾಲ್ಕು ಕಡೆ ಬರುತ್ತಿದ್ದಾರೆ. ಗುರುವಾರ ರಾತ್ರಿ ಹುಬ್ಬಳ್ಳಿಯಲ್ಲಿ ಅವರದ್ದು ವಾಸ್ತವ್ಯ ಇದೆ. ನಾಳೆ ಕೆಎಲ್ಇ ಸಂಸ್ಥೆಯ ಭೂಮರಡ್ಡಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.

ಧಾರವಾಡದಲ್ಲಿ ಒಂದು ಕಾರ್ಯಕ್ರಮ, ಇದಾದ ಬಳಿಕ ಕುಂದಗೋಳದಲ್ಲಿ ರೋಡ್ ಶೋದಲ್ಲಿ ಭಾಗಿಯಾಗುತ್ತಾರೆ. ನಂತರ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಗೆ ಬರುತ್ತಾರೆ. ಅಲ್ಲಿಂದ ಬೆಳಗಾವಿಗೆ ಆಗಮಿಸಿ ಪಾರ್ಟಿ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. 28 ರಂದು ರಾತ್ರಿ 10 ಗಂಟೆಗೆ ವಾಪಾಸ್ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ಎಕ್ಸಾಮ್ ವಾರಿಯರ್ಸ್ ಪುಸ್ತಕ ವಿತರಿಸಿದ ಪ್ರಹ್ಲಾದ್ ಜೋಶಿ