ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದ್ದು, ಒಂದು ವಾರದಲ್ಲಿ ಬಾಣಂತಿಯರು ಮತ್ತು ಗರ್ಭಿಣಿಯರು ಸೇರಿ 12 ಮಹಿಳೆಯರು ಸಾವನ್ನಪ್ಪಿರುವ ಆಘಾತಕಾರಿ ಸಂಗತಿ ವರದಿಯಾಗಿದೆ.
ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಸೂಕ್ತ ಚಿಕಿತ್ಸೆಯ ಕೊರತೆ ಇರಬಹುದೇ ಎಂಬ ಸಂಶಯ ಕಾಡಿದೆ. ಆಸ್ಪತ್ರೆಯಲ್ಲಿ ಎಲ್ಲಿ ಲೋಪವಾಗುತ್ತಿದೆ ಎಂದು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಇಲ್ಲಿನ ಶಾಸಕ ವಾಸು ಹೇಳಿದ್ದಾರೆ.
ವೈದ್ಯರ ಜತೆ ವಾಸು ಈ ಕುರಿತು ಸಮಾಲೋಚನೆ ನಡೆಸಿದರು. ಆಸ್ಪತ್ರೆಯಲ್ಲಿ ಸೂಕ್ತ ಸಿಬ್ಬಂದಿ ಮತ್ತು ವೆಂಟಿಲೇಟರ್ಗಳ ಮತ್ತು ಔಷಧಿಗಳ ಕೊರತೆ ಬಾಣಂತಿಯರ ಸಾವಿಗೆ ಕಾರಣವೆಂದು ಹೇಳಲಾಗುತ್ತಿದೆ. ಆದರೆ ವೈದ್ಯರನ್ನು ಕೇಳಿದಾಗ ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದರಿಂದ ಇಂತಹ ಪ್ರಕರಣಗಳು ಹೆಚ್ಚಿಗೆ ಸಂಭವಿಸಿವೆ ಎಂದು ಸಮಜಾಯಿಷಿ ನೀಡಿದ್ದಾರೆ.