Webdunia - Bharat's app for daily news and videos

Install App

ಅಕಾಲಿಕ ಮಳೆ: ದಕ್ಷಿಣ ಭಾರತದ ಗ್ರಾಹಕರ ಪಾಲಿಗೆ ಹುಳಿಯಾದ ಟೊಮೆಟೊ

Webdunia
ಬುಧವಾರ, 8 ಡಿಸೆಂಬರ್ 2021 (20:40 IST)
ದೇಶದ ಅನೇಕ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಫಸಲು ಹಾನಿಯಾಗಿರುವುದಷ್ಟೇ ಅಲ್ಲದೇ ಸಾಗಣೆ ವೆಚ್ಚ ಅಧಿಕವಾಗಿ ತರಕಾರಿ ಬೆಲೆ ಗಗನಕ್ಕೇರಿದೆ. ಇಂಧನ ದರ, ಎಲ್‌ಪಿಜಿ ಸಿಲಿಂಡರ್‌ ಮತ್ತು ಅಗತ್ಯ ವಸ್ತುಗಳ ದರ ಏರಿಕೆಯಿಂದ ಹೈರಾಣಾಗಿರುವ ಗ್ರಾಹಕರಿಗೆ ತರಕಾರಿ ತುಟ್ಟಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಅದರಲ್ಲೂ ದಕ್ಷಿಣಭಾರತದಲ್ಲಿ ಕಳೆದ ತಿಂಗಳಿನಿಂದ ಒಂದೇ ರಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಟೊಮೆಟೊ ಬೆಲೆ ಅಂಬರದೆತ್ತರಕ್ಕೇರಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ದಕ್ಷಿಣಭಾರತದ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಪ್ರತಿ ಕೆ.ಜಿ.ಗೆ 140 ರೂ.ಗಳಿಗೆ ಮಾರಾಟವಾಗುತ್ತಿದೆ.
ಟೊಮೆಟೊ ಸೇರಿದಂತೆ ತರಕಾರಿ ಬೆಲೆ ಏರಿಕೆಗೆ ಮುಖ್ಯ ಕಾರಣ ಮಳೆ. ಈ ವರ್ಷ ಬಿಸಿಲಿನ ಮುಖ ನೋಡಿದ್ದಕ್ಕಿಂತ ಹೆಚ್ಚು ನೀರಿನ ಹೊಳೆಯನ್ನೇ ನೋಡುವ ಸ್ಥಿತಿ ಎದುರಾಗಿದೆ.
ಎಲ್ಲೆಲ್ಲಿ ಎಷ್ಟೆಷ್ಟಿದೆ ಟೊಮೆಟೊ ಬೆಲೆ:
ಉತ್ತರ ಭಾರತದಲ್ಲಿ ಕೆ.ಜಿ. ಟೊಮೆಟೊ ಬೆಲೆ 30-83 ರೂ. ಗಳಿಗೆ ಮಾರಾಟವಾಗುತ್ತಿದೆ.
ಪಶ್ಚಿಮ ಪ್ರದೇಶಗಳಲ್ಲಿ ಕೆ.ಜಿ. ಟೊಮೆಟೊ  30 -85 ರೂ. ಗಳಿಗೆ ಮಾರಾಟವಾಗುತ್ತಿದೆ.
ಅಂಡಮಾನ್ ನಿಕೋಬಾರ್‌ನಲ್ಲಿ ಕೆ.ಜಿ ಟೊಮೆಟೊ  140 ರೂ. ಗಳಿಗೆ ಮಾರಾಟವಾಗುತ್ತಿದೆ.
ಕೇರಳದ ತಿರುವನಂತಪುರದಲ್ಲಿ ಕೆ.ಜಿ. ಟೊಮೆಟೊ  140 ರೂ. ಗಳಿಗೆ ಮಾರಾಟವಾಗುತ್ತಿದೆ.
ಅಂಡಮಾನ್ ನಿಕೋಬಾರ್ ನ ಮಾಯಾಬಂದರಿನಲ್ಲಿ ಕೆ.ಜಿ. ಟೊಮೆಟೊ  140 ರೂ.ಗಳಿಗೆ ಮಾರಾಟವಾಗುತ್ತಿದೆ.
ಕೇರಳದ ತಿರುವನಂತಪುರದಲ್ಲಿ ಕೆ.ಜಿ. ಟೊಮೆಟೊ  125 ರೂ.ಗಳಿಗೆ ಮಾರಾಟವಾಗುತ್ತಿದೆ.
ತಮಿಳುನಾಡು ಕೆ.ಜಿ. ಟೊಮೆಟೊ  125 ರೂ.ಗಳಿಗೆ ಮಾರಾಟವಾಗುತ್ತಿದೆ.
ಕರ್ನಾಟಕದ ಮಂಗಳೂರು ತುಮಕೂರಿನಲ್ಲಿ ಕೆ.ಜಿ. ಟೊಮೆಟೊ 102 ರೂ.ಗಳಿಗೆ ಮಾರಾಟವಾಗುತ್ತಿದೆ.
ಧಾರವಾಡ 75 ರೂ., ಮೈಸೂರಿನಲ್ಲಿ 74 ರೂ., ಶಿವಮೊಗ್ಗದಲ್ಲಿ 67ರೂ., ಬೆಂಗಳೂರಿನಲ್ಲಿ 57 ರೂ.ಗಳಿಗೆ ಕೆ.ಜಿ. ಟೊಮೆಟೊ  ಮಾರಾಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ