Webdunia - Bharat's app for daily news and videos

Install App

ಮದುವೆಗೆ ಸಿದ್ಧತೆ, ವಿದ್ಯಾರ್ಥಿನಿ ಆತ್ಮಹತ್ಯೆ

Webdunia
ಭಾನುವಾರ, 15 ಮೇ 2022 (13:45 IST)
ತುಮಕೂರು: ವಿದ್ಯಾರ್ಥಿನಿಯೋರ್ವಳು ಬೆಂಕಿಹಚ್ಚಿಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
 
ತೇಜಾ (19) ಆತ್ಮಹತ್ಯೆ ಮಾಡಿಕೊಂಡು ವಿದ್ಯಾರ್ಥಿನಿ. ಈಕೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ಬೆಳಗಿನಜಾವ 4.30ರ ಸುಮಾರಿನಲ್ಲಿ ಘಟನೆ ಸಂಭವಿಸಿದೆ.
 
ತೇಜಾ, ಪಾವಗಡದಲ್ಲಿ ಮೊದಲನೇ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇದೇ ಮೇ 24-25 ರಂದು ಮದುವೆ ನಿಶ್ಚಯವಾಗಿತ್ತು‌. ಪೋಷಕರು ಮದುವೆ ಆಮಂತ್ರಣ ಪತ್ರಿಕೆಯನ್ನು ಎಲ್ಲಾ ಕಡೆ ಕೊಟ್ಟಿದ್ದರು‌.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 
 
ಈಕೆಗೆ ಮದುವೆ ಇಷ್ಟವಿರಲಿಲ್ಲವೋ ಅಥವಾ ಇನ್ನಾವ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಈ ಬಗ್ಗೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments