Publish Date: Thu, 26 Jan 2023 (18:46 IST)
Updated Date: Thu, 26 Jan 2023 (18:58 IST)
ನಿನ್ನೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಘೋಷಿಸಿದೆ. ಈ ಹಿನ್ನೆಲೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ಸಚಿವ ಅಶ್ವತ್ಥ ನಾರಾಯಣ ಅವರು ಅಭಿನಂದಿಸಿದ್ದಾರೆ.ಇದೇ ವೇಳೆ ಮಾತನಾಡಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು, ಪದ್ಮವಿಭೂಷಣ ಪುರಸ್ಕಾರ ಬಂದಿದ್ದಕ್ಕೆ ಬಹಳ ಸಂತೋಷ ಆಗುತ್ತಿದೆ. ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯ, ಮತ್ತು ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ನಮ್ರತೆಯಿಂದ ಅರ್ಪಿಸುತ್ತೇನೆ ಎಂದು ಮಾಜಿ ಸಿಎಂ ಎಸ್. ಎಂ ಕೃಷ್ಣ ಹೇಳಿದ್ದಾರೆ.