Select Your Language

Notifications

webdunia
webdunia
webdunia
webdunia

ಬಾಬಾಗೆ ರಾಷ್ಟ್ರಪತಿ, ಪ್ರಧಾನಿ ನಮನ

ಬಾಬಾಗೆ ರಾಷ್ಟ್ರಪತಿ, ಪ್ರಧಾನಿ ನಮನ
bangalore , ಗುರುವಾರ, 14 ಏಪ್ರಿಲ್ 2022 (20:18 IST)
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ದೇಶದ ಜನರಿಗೆ 
ಅಂಬೇಡ್ಕರ್ ಜಯಂತಿ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್​ ಮಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವಪೂರ್ವಕ ನಮನಗಳು. ಅವರು ಸಾಮಾಜಿಕ ನ್ಯಾಯದ ಪರವಾಗಿದ್ದ ಪ್ರಬಲ ವಕೀಲರಾಗಿದ್ದರು . ಸಂವಿಧಾನವನ್ನು ರಚಿಸುವ ಮೂಲಕ ಆಧುನಿಕ ಭಾರತಕ್ಕೆ ಅಡಿಗಲ್ಲು ಹಾಕಿದರು. ಇದಕ್ಕೆ ಬದ್ಧವಾಗಿ, ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣ ಮಾಡುವಲ್ಲಿ ನಮ್ಮ ಪಾತ್ರ ನಿರ್ವಹಿಸೋಣ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನಗಳು. ಭಾರತದ ಅಭಿವೃದ್ಧಿಗಾಗಿ ಅವರು ನೀಡಿದ ಕೊಡುಗೆಗಳೆಂದೂ ಸ್ಮರಣೀಯ. ಅಂಬೇಡ್ಕರ್ ಕನಸಿನ ಭಾರತ ನಿರ್ಮಾಣಮಾಡಲು ನಾವು ಬದ್ಧರಾಗಿದ್ದೇವೆ ಎಂಬುದನ್ನು ಈ ದಿನನಾನು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ ತಾಲೂಕಿನಲ್ಲಿ ರಿಲೀಸ್ ಆಗದ ‘ಕೆಜಿಎಫ್-2’