Webdunia - Bharat's app for daily news and videos

Install App

ಪ್ರೆಸ್ ಕ್ಲಬ್ ಅತ್ಯುತ್ತಮ ವ್ಯಕ್ತಿ ಯಡಿಯೂರಪ್ಪ

Webdunia
ಭಾನುವಾರ, 2 ಜನವರಿ 2022 (14:40 IST)
ಬೆಂಗಳೂರು ಪ್ರೆಸ್‍ಕ್ಲಬ್ ನೀಡುವ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಜನರಾಗಿದ್ದಾರೆ.
ಪ್ರೆಸ್‍ಕ್ಲಬ್ ವಿಶೇಷ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕøತ ಹರೆಕಳ ಹಾಜಬ್ಬ ಮತ್ತು ಕೊರೊನಾ ನಿರ್ವಹಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಆಯ್ಕೆಯಾಗಿದ್ದಾರೆ.
 
ಎಂ.ಕೆ.ಭಾಸ್ಕರ್, ಪದ್ಮರಾಜ್ ದಂಡಾವತಿ, ರಂಜಾನ್ ದರ್ಗಾ, ಕೆ.ಜಿ.ವಾಸುಕಿ, ಡಾ. ಜಗದೀಶ್ ಕೊಪ್ಪ, ಕೆ.ಆರ್. ಬಾಲಸುಬ್ರಹ್ಮಣ್ಯಂ, ಬಿ.ವಿ.ಶಿವಶಂಕರ್, ಯತೀಶ್‍ಕುಮಾರ್ ಜಿ.ಡಿ., ಸುದರ್ಶನ್ ಚನ್ನಂಗಿಹಳ್ಳಿ, ದೊಡ್ಡಬೊಮ್ಮಯ್ಯ, ಕೆ.ಎಂ.ವೀರೇಶ್, ವಾಸಂತಿ ಹರಿಪ್ರಕಾಶ್, ಪ್ರಶಾಂತ್ ನಾಥೂ, ಪ್ರಕಾಶ್ ಬೆಳವಾಡಿ, ಎಸ್.ಎಚ್.ಮಾರುತಿ, ಭಾನುಪ್ರಕಾಶ್ ಚಂದ್ರ ಸೇರಿದಂತೆ 16 ಮಂದಿ ಹಿರಿಯ ಪತ್ರಕರ್ತರನ್ನು 2021ನೆ ಸಾಲಿನ ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
 
ಇದೇ ಜನವರಿ 6ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್‍ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪುರಸ್ಕøತರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರೆಸ್‍ಕ್ಲಬ್ ಅಧ್ಯಕ್ಷರಾದ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಎಚ್.ವಿ. ಕಿರಣ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments