Select Your Language

Notifications

webdunia
webdunia
webdunia
webdunia

ಜೆಡಿಎಸ್ ಸದಸ್ಯರಿಂದ ಮೇಯರ್ ಸ್ಥಾನಕ್ಕಾಗಿ ಒತ್ತಡ: ಕುಮಾರಸ್ವಾಮಿ

ಜೆಡಿಎಸ್ ಸದಸ್ಯರಿಂದ ಮೇಯರ್ ಸ್ಥಾನಕ್ಕಾಗಿ ಒತ್ತಡ: ಕುಮಾರಸ್ವಾಮಿ
ಬೆಂಗಳೂರು , ಮಂಗಳವಾರ, 12 ಸೆಪ್ಟಂಬರ್ 2017 (15:42 IST)
ಬಿಬಿಎಂಪಿಯ ಜೆಡಿಎಸ್ ಸದಸ್ಯರು ಮೇಯರ್ ಸ್ಥಾನ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಸೂಚನೆ ಮೇರೆಗೆ ಗೃಹಸಚಿವ ರಾಮಲಿಂಗಾರೆಡ್ಡಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅವರೇನು ಚರ್ಚಿಸಿದ್ದಾರೆ ಎನ್ನುವುದು ಗೊತ್ತಿಲ್ಲ. ರಾಮಲಿಂಗಾರೆಡ್ಡಿ ಮತ್ತು ದೇವೇಗೌಡರೊಂದಿಗೆ  ಚರ್ಚೆ ನಡೆಸಿದ ನಂತರ ಮೇಯರ್ ಸ್ಥಾನದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
 
ರಾಮಲಿಂಗಾರೆಡ್ಡಿ ಮತ್ತು ದೇವೇಗೌಡರೊಂದಿಗೆ ಚರ್ಚಿಸಿದ ನಂತರ ಬಿಬಿಎಂಪಿಯ ಜೆಡಿಎಸ್ ಸದಸ್ಯರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
 
ಬಿಬಿಎಂಪಿಯಲ್ಲಿ ಮೈತ್ರಿ ಮುಂದುವರಿಯಬೇಕಾದಲ್ಲಿ ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ನೀಡಬೇಕು ಎನ್ನುವುದು ಜೆಡಿಎಸ್ ನಾಯಕರ ಒತ್ತಾಯವಾಗಿದೆ. ಕೆಲ ದಿನಗಳಲ್ಲಿ ಮೈತ್ರಿ ಮುಂದುವರಿಯಲಿದೆಯೇ ಬ್ರೆಕ್ ಬೀಳಲಿದೆಯೋ ಕಾದು ನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗಣಪತಿ ಸಾವಿಗೆ ನ್ಯಾಯ ಮುಖ್ಯವೋ, ರಾಜೀನಾಮೆ ಮುಖ್ಯವೋ: ಬಿಎಸ್‌ವೈಗೆ ಚಾರ್ಜ್ ತರಾಟೆ