Webdunia - Bharat's app for daily news and videos

Install App

ಅಕಾಲಿಕ ಮಳೆ ಪ್ರಮಾಣ ಹೆಚ್ಚಳ..!

Webdunia
ಭಾನುವಾರ, 7 ನವೆಂಬರ್ 2021 (20:17 IST)
ಬೆಂಗಳೂರು: ಈ ವರ್ಷ ಅಕಾಲಿಕ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ. ಮಳೆ ಸಂಬಂಧಿತ ಹಾನಿ ತಡೆಗೆ ತುರ್ತು, ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಇನ್ನೆರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಮುನ್ಸೂಚನೆ ಇದೆ. ಬೆಂಗಳೂರು ಮಳೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಮಳೆಯನ್ನು ನಿಭಾಯಿಸುವ ವಿಧಾನ ಬದಲಾಯಿಸಿ, ಮಳೆಯಿಂದ ಆಗುತ್ತಿರುವ ಹಾನಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಬೆಂಗಳೂರು ಅಂತರರಾಷ್ಟ್ರೀಯ ನಗರವಾಗಿದ್ದು, ನಗರದಲ್ಲಿ ಮಳೆಯಿಂದಾಗುವ ಹಾನಿಯನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ತೀವ್ರ ಪ್ರವಾಹವಾಗುವ ಪ್ರದೇಶಗಳನ್ನು ಹಾಗೂ ಮುಖ್ಯ ಚರಂಡಿಗಳಲ್ಲಿ ಸಮಸ್ಯೆ ಇರುವಲ್ಲೆಲ್ಲಾ ಗುರುತಿಸಿ ಸರಿಪಡಿಸಬೇಕು. ಚರಂಡಿಗಳ ನಿರ್ಮಾಣ ಮಾಡುವಾಗ ಅವುಗಳ ವಿನ್ಯಾಸವನ್ನು ಸೂಕ್ತವಾಗಿ ಮಾಡಬೇಕು. ರಾಜಕಾಲುವೆಗಳ ಸುತ್ತಲು ಅಕ್ರಮ ಬಡಾವಣೆಗಳು ಬಂದಿವೆ. ಪ್ರಾರಂಭದಲ್ಲಿಯೇ ಅಕ್ರಮವನ್ನು ತಡೆಯಬೇಕಿತ್ತು. ಆದರೆ ಆಡಳಿತಾತ್ಮಕವಾಗಿ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಮುಂದಿನ ಸುದ್ದಿ
Show comments