Webdunia - Bharat's app for daily news and videos

Install App

ಕ್ಯಾನ್ಸರ್ ತಡೆಗೆ ಆಯುರ್ವೇದಿಕ್ ಸಂಶೋಧನೆ ಅಗತ್ಯ:ಶ್ರೀ ಶ್ರೀ ರವಿಶಂಕರ ಗುರೂಜಿ

Webdunia
ಸೋಮವಾರ, 8 ಅಕ್ಟೋಬರ್ 2018 (16:15 IST)
ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳ ಪತ್ತೆಗೆ ಆಯುರ್ವೇದದಲ್ಲಿ ಸಂಶೋಧನೆ ಮಾಡುವ ಅಗತ್ಯವಿದೆ ಎಂದು ಆರ್ಟ್ ಆಪ್ ಲೀವಿಂಗ್ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ ಗುರೂಜಿ ಹೇಳಿದ್ದಾರೆ.
ಶ್ರೀ ಶ್ರೀ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ರಾಷ್ಟ್ರೀಯ ಗುದರೋಗಗಳ (ಪ್ರೊಕ್ಟಾಲಜಿ) ಚಿಕಿತ್ಸಾ ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಜೀವನ ಶೈಲಿಯಿಂದ ಅನೇಕ ಹೊಸ ಹೊಸ ರೋಗಗಳು ಬರುತ್ತಿದ್ದು, ಅವುಗಳ ಚಿಕಿತ್ಸೆಗೆ ಆಯುರ್ವೇದದಲ್ಲಿ ಸಂಶೋಧನೆ ನಡೆಸುವುದು ಅಗತ್ಯವಿದೆ ಎಂದು ಹೇಳಿದರು.
 
ಅಲ್ಲದೇ ಆಯುರ್ವೇದ ಮತ್ತು ಅಲೋಪತಿ ವೈದ್ಯ ಪದ್ದತಿಗಳ ಸಮ್ಮಿಲನ ಅತೀ ಅಗತ್ಯವಿದೆ. ಈ ನಿಟ್ಟಿನಲ್ಲಿ ಪೂರಕ ಬೆಳವಣಿಗೆಗಳು ನಡೆಯಬೇಕು ಎಂದು ಆಶಿಸಿದರು.
 
ಎರಡು ದಿನಗಳ ವಿಶೇಷ ಕಾರ್ಯಾಗಾರದಲ್ಲಿ ದೇಶದ ವಿವಿಧ ರಾಜ್ಯಗಳ ಸುಮಾರು ೨೦ ಕ್ಕೂ ಹೆಚ್ಚು ಆಯುರ್ವೇದ ಮತ್ತ ಅಲೋಪತಿ ಶಸ್ತ್ರ ಚಿಕಿತ್ಸಕರು ತರಬೇತಿ ನೀಡಿದ್ದು, ಸುಮಾರು ಐವತ್ತಕ್ಕೂ ಹೆಚ್ಚು ಆಯುರ್ವೇದ ಶಸ್ತ್ರ ಚಿಕಿತ್ಸಕರು ಕಾರ್ಯಾಗಾರದಲ್ಲಿ ತರಬೇತಿ ಪಡೆದರು.
 
ಕಾರ್ಯಾಗಾರದಲ್ಲಿ ಹಿರಿಯ ಆಯುರ್ವೇದ ಚಿಕಿತ್ಸೆ ತಜ್ಞರಾದ ಡಾ ಮನೋರಂಜನ್ ಸಾಹು, ಡಾ. ರವಿಶಂಕರ ಪೆರ್ವಾಜೆ, ಡಾ.ಕ್ಷೀರಸಾಗರ್, ಶಲ್ಯ ತಂತ್ರ ವಿಭಾಗದ ಮುಖ್ಯಸ್ಥ ಡಾ.ಪಿ.ರಮೇಶ್ ಭಟ್ ಪಾಲ್ಗೊಂಡಿದ್ದರು.
 
ಹೆಚ್ಚಿನ ಮಾಹಿತಿಗಾಗಿ ಡಾ. ರಮೇಶ್ ಭಟ್ - 9845089261

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments