Webdunia - Bharat's app for daily news and videos

Install App

ಕ್ಯಾನ್ಸರ್ ತಡೆಗೆ ಆಯುರ್ವೇದಿಕ್ ಸಂಶೋಧನೆ ಅಗತ್ಯ:ಶ್ರೀ ಶ್ರೀ ರವಿಶಂಕರ ಗುರೂಜಿ

Webdunia
ಸೋಮವಾರ, 8 ಅಕ್ಟೋಬರ್ 2018 (16:15 IST)
ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳ ಪತ್ತೆಗೆ ಆಯುರ್ವೇದದಲ್ಲಿ ಸಂಶೋಧನೆ ಮಾಡುವ ಅಗತ್ಯವಿದೆ ಎಂದು ಆರ್ಟ್ ಆಪ್ ಲೀವಿಂಗ್ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ ಗುರೂಜಿ ಹೇಳಿದ್ದಾರೆ.
ಶ್ರೀ ಶ್ರೀ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ರಾಷ್ಟ್ರೀಯ ಗುದರೋಗಗಳ (ಪ್ರೊಕ್ಟಾಲಜಿ) ಚಿಕಿತ್ಸಾ ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಜೀವನ ಶೈಲಿಯಿಂದ ಅನೇಕ ಹೊಸ ಹೊಸ ರೋಗಗಳು ಬರುತ್ತಿದ್ದು, ಅವುಗಳ ಚಿಕಿತ್ಸೆಗೆ ಆಯುರ್ವೇದದಲ್ಲಿ ಸಂಶೋಧನೆ ನಡೆಸುವುದು ಅಗತ್ಯವಿದೆ ಎಂದು ಹೇಳಿದರು.
 
ಅಲ್ಲದೇ ಆಯುರ್ವೇದ ಮತ್ತು ಅಲೋಪತಿ ವೈದ್ಯ ಪದ್ದತಿಗಳ ಸಮ್ಮಿಲನ ಅತೀ ಅಗತ್ಯವಿದೆ. ಈ ನಿಟ್ಟಿನಲ್ಲಿ ಪೂರಕ ಬೆಳವಣಿಗೆಗಳು ನಡೆಯಬೇಕು ಎಂದು ಆಶಿಸಿದರು.
 
ಎರಡು ದಿನಗಳ ವಿಶೇಷ ಕಾರ್ಯಾಗಾರದಲ್ಲಿ ದೇಶದ ವಿವಿಧ ರಾಜ್ಯಗಳ ಸುಮಾರು ೨೦ ಕ್ಕೂ ಹೆಚ್ಚು ಆಯುರ್ವೇದ ಮತ್ತ ಅಲೋಪತಿ ಶಸ್ತ್ರ ಚಿಕಿತ್ಸಕರು ತರಬೇತಿ ನೀಡಿದ್ದು, ಸುಮಾರು ಐವತ್ತಕ್ಕೂ ಹೆಚ್ಚು ಆಯುರ್ವೇದ ಶಸ್ತ್ರ ಚಿಕಿತ್ಸಕರು ಕಾರ್ಯಾಗಾರದಲ್ಲಿ ತರಬೇತಿ ಪಡೆದರು.
 
ಕಾರ್ಯಾಗಾರದಲ್ಲಿ ಹಿರಿಯ ಆಯುರ್ವೇದ ಚಿಕಿತ್ಸೆ ತಜ್ಞರಾದ ಡಾ ಮನೋರಂಜನ್ ಸಾಹು, ಡಾ. ರವಿಶಂಕರ ಪೆರ್ವಾಜೆ, ಡಾ.ಕ್ಷೀರಸಾಗರ್, ಶಲ್ಯ ತಂತ್ರ ವಿಭಾಗದ ಮುಖ್ಯಸ್ಥ ಡಾ.ಪಿ.ರಮೇಶ್ ಭಟ್ ಪಾಲ್ಗೊಂಡಿದ್ದರು.
 
ಹೆಚ್ಚಿನ ಮಾಹಿತಿಗಾಗಿ ಡಾ. ರಮೇಶ್ ಭಟ್ - 9845089261

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments