Webdunia - Bharat's app for daily news and videos

Install App

ಕಮರ್ಷಿಯಲ್ ಸಿಲಿಂಡರ್​ಗಳ ಬೆಲೆಯಲ್ಲಿ 100 ರೂಪಾಯಿ ಏರಿಕೆ

Webdunia
ಬುಧವಾರ, 1 ಡಿಸೆಂಬರ್ 2021 (21:45 IST)
ಡಿಸೆಂಬರ್ 1, 2021ರಿಂದ ಮತ್ತೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿದೆ. ನಿಮ್ಮ ನಗರದಲ್ಲಿ ಮನೆಗಳಲ್ಲಿ ಬಳಸುವ ಎಲ್​ಪಿಜಿ ಸಿಲಿಂಡರ್ ದರ ಎಷ್ಟಿದೆ ಎಂಬ ವಿವರ ಇಲ್ಲಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಇಂದು (ಡಿಸೆಂಬರ್ 1, 2021) ಮತ್ತೆ ಹೆಚ್ಚಿಸಲಾಗಿದ್ದು, ಜನಸಾಮಾನ್ಯರು ಮತ್ತು ವ್ಯಾಪಾರಿಗಳ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ. 19 ಕೇಜಿಯ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು ತಲಾ 100 ರೂಪಾಯಿ ಹೆಚ್ಚಳ ಮಾಡಲಾಗಿದೆ. ನವೆಂಬರ್ 1ರಂದು ಬೆಲೆ ಏರಿಕೆ ಮಾಡಿದ ನಂತರ ಇದು ಎರಡನೇ ಹೆಚ್ಚಳವಾಗಿದೆ.
 
LPG ವಾಣಿಜ್ಯ ಗ್ಯಾಸ್ ಸಿಲಿಂಡರ್ ಇಂದಿನಿಂದ ಅನ್ವಯ ಆಗುವ ಬೆಲೆ
ಬೆಲೆ ಹೆಚ್ಚಳದ ನಂತರ 19 ಕೇಜಿಯ ವಾಣಿಜ್ಯ ಸಿಲಿಂಡರ್ ಈಗ ದೆಹಲಿಯಲ್ಲಿ 2101 ರೂಪಾಯಿ., ಮುಂಬೈನಲ್ಲಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 2,051 ರೂ., ಕೋಲ್ಕತ್ತಾದಲ್ಲಿ 2,174.50 ರೂ., ಚೆನ್ನೈನಲ್ಲಿ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,234.50 ಆಗಿದೆ.ಇದಕ್ಕೂ ಮುನ್ನ ನವೆಂಬರ್ 1ರಂದು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು 266 ರೂಪಾಯಿಯಿಂದ 2000.50 ರೂ.ಗೆ ಹೆಚ್ಚಿಸಲಾಗಿತ್ತು. ನವೆಂಬರ್ 1ರ ಹೆಚ್ಚಳಕ್ಕೆ ಮೊದಲು, ರಾಷ್ಟ್ರ ರಾಜಧಾನಿಯಲ್ಲಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 1734 ರೂಪಾಯಿಯಿತ್ತು. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.
 
ಈ ಮಧ್ಯೆ, ಸಬ್ಸಿಡಿ ರಹಿತ 14.2 ಕೇಜಿ ಅಡುಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ದೆಹಲಿಯಲ್ಲಿ ರೂ. 899.50, ಕೋಲ್ಕತ್ತಾದಲ್ಲಿ ರೂ. 926, ಮುಂಬೈನಲ್ಲಿ ರೂ. 899.50 ಮತ್ತು ಚೆನ್ನೈನಲ್ಲಿ ಪ್ರತಿ ಸಿಲಿಂಡರ್‌ಗೆ ರೂ. 915.50, ಬೆಂಗಳೂರಿನಲ್ಲಿ 902.50 ರೂಪಾಯಿ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments