Webdunia - Bharat's app for daily news and videos

Install App

ಮೂರನೇ ತರಗತಿ ಬಾಲಕಿಯ ಮೇಲೆ ಶಿಕ್ಷಕನ ಲೈಂಗಿಕ ದೌರ್ಜನ್ಯ

Webdunia
ಗುರುವಾರ, 28 ಆಗಸ್ಟ್ 2014 (11:24 IST)
ಮೂರನೇ  ತರಗತಿಯ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಗೋಕರ್ಣ ಠಾಣೆ ಪೋಲಿಸರು ಬುಧವಾರ ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಅಶೋಕೆ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭಾಸ್ಕರ ಗಣಪತಿ ಅಡ್ಪೇಕರ್(53) ಎಂಬಾತನೇ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತ ಶಿಕ್ಷಕನಾಗಿದ್ದಾನೆ. ಈತ ಕರ್ತವ್ಯ ನಿರ್ವಹಿಸುತ್ತಿದ್ದ ಶಾಲೆಯಲ್ಲಿ ಇಬ್ಬರೇ ಶಿಕ್ಷಕರಿದ್ದು, ಒಬ್ಬರು ರಜೆಯಲ್ಲಿದ್ದ ಸಂದರ್ಭದಲ್ಲಿ ಈತ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನೆಂದು ಹೇಳಲಾಗುತ್ತಿತ್ತು. 
 
ಒಮ್ಮೊಮ್ಮೆ ಶಾಲೆಯ ಎಲ್ಲ ವಿದ್ಯಾರ್ಥಿಗಳ ಎದುರೇ ಲೈಂಗಿಕ ಪ್ರಚೋದನಾತ್ಮಕ ಮಾತುಗಳನ್ನಾಡುತ್ತಿದ್ದ ಎಂಬ ದೂರುಗಳು ಕೇಳಿಬರುತ್ತಿತ್ತು. ಈಗ ಮೂರನೇ ತರಗತಿಯ ಬಾಲಕಿಯೊಡನೆ ಆತ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆಕೆ ಶಾಲೆಗೆ ಹೋಗಲು ನಿರಾಕರಿಸಿದ್ದಾಳೆ. ವಿಷಯವೇನೆಂದು ಪಾಲಕರು ಆಕೆಯಲ್ಲಿ ವಿಚಾರಿಸಿದಾಗ ಶಿಕ್ಷಕನ ಕುಕೃತ್ಯ ಬೆಳಕಿಗೆ ಬಂದಿದೆ.
 
ಆಕ್ರೋಶಗೊಂಡ ಪಾಲಕ ವರ್ಗದವರು ಶಾಲೆಗೆ ಮುತ್ತಿಗೆ ಹಾಕಿ ಶಿಕ್ಷಕನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಪ್ರತಿಭಟನೆ ನಡೆಸಿದ್ದಾರೆ. ಕಳೆದು ಐದು ವರ್ಷಗಳಿಂದ ಈ ಶಿಕ್ಷಕ ಇದೇ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಎರಡು ಮೂರು ಬಾರಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳವನ್ನು ನೀಡಿ ಮಾನಸಿಕ ಹಿಂಸೆ ನೀಡಿದ್ದ ಎಂದು ಗ್ರಾಮಸ್ಥರು ಬಿಇಓ ಶಾಂತೇಶ ನಾಯಕ ಅವರ ಬಳಿ ದೂರಿದ್ದಾರೆ. ಶಿಕ್ಷಕ ಭಾಸ್ಕರನನ್ನು ವರ್ಗಾವಣೆ ಮಾಡುವ ಭರವಸೆಯನ್ನು ಅವರು ನೀಡಿದ್ದು, ಸದ್ಯ ಗೋಕರ್ಣ ಪೊಲೀಸರು ಪೋಸ್ಕೋ ಕಾಯ್ದೆಯಡಿ ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ