Webdunia - Bharat's app for daily news and videos

Install App

ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಸಹಕಾರಿಯಾಗುತ್ತಿಲ್ಲ ಎಂದ ಕೃಷಿ ಸಚಿವ!

Webdunia
ಶನಿವಾರ, 15 ಡಿಸೆಂಬರ್ 2018 (17:37 IST)
ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಲ್ಲಿ ಹತ್ತಾರು ಗೊಂದಲಗಳಿವೆ. ರೈತಾಪಿ ಜನಕ್ಕೆ ಸೂಕ್ತ ರೀತಿಯಲ್ಲಿ ಸಹಕಾರಿ ಆಗುತ್ತಿಲ್ಲ ಎಂದು ಕೃಷಿ ಸಚಿವ ಹೇಳಿಕೆ ನೀಡಿದ್ದಾರೆ.

ರೈತಾಪಿ ಜನಕ್ಕೆ ಸೂಕ್ತವಾಗಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಸಹಕಾರಿಯಾಗುತ್ತಿಲ್ಲ ಎಂದು ಕೃಷಿ ಸಚಿವ   ಎನ್. ಎಚ್.ಶಿವಶಂಕರ ರೆಡ್ಡಿ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ನಡೆದ ಕೃಷಿ ತಂತ್ರಜ್ಞರ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಫಸಲ್ ಬಿಮಾ ಗೊಂದಲ ನಿವಾರಣೆಗೆ ಇಷ್ಟರಲ್ಲಿಯೇ ಕೇಂದ್ರದ ಕೃಷಿ ಸಚಿವರ ಜೊತೆ ಸಭೆ ನಡೆಸಲಾಗುವುದು ಎಂದರು.
2017 ಮತ್ತು 2018 ವರ್ಷದಲ್ಲಿ ರಾಜ್ಯದಿಂದ ಒಂದು ಸಾವಿರದಾ ಎರಡು ನೂರು ಕೋಟಿ ಹಣ ಫಸಲ್ ವಿಮಾ ಯೋಜನೆಗೆ ತುಂಬಲಾಗಿದೆ. ಆದರೆ ರೈತರಿಗೆ ಕೇವಲ 600 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ.

ಉಳಿದ 600 ಕೋಟಿ ರೂಪಾಯಿ ವಿಮಾ ಕಂಪನಿಗಳ ಪಾಲಾಗಿದೆ. ಮೇಲಾಗಿ ಸಕಾಲಕ್ಕೆ ಹಣ ಕೂಡಾ ಬಿಡುಗಡೆ ಮಾಡುತ್ತಿಲ್ಲ ಎಂದು ಸಚಿವ ಶಿವಶಂಕರರೆಡ್ಡಿ ಬೇಸರ ವ್ಯಕ್ತಪಡಿಸಿದರು. ಇನ್ನೂ ಸಂಸದ ಸಿದ್ದೇಶ್ವರ್ ಕೂಡ ಫಸಲು ಬಿಮಾ ಯೋಜನೆಯಲ್ಲಿ ಗೊಂದಲ ಇರುವುದು ನಿಜ, ಹಲವು ಜನಕ್ಕೆ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments