Webdunia - Bharat's app for daily news and videos

Install App

ಮಹಾದಾಯಿ ವಿವಾದಲ್ಲಿ ಪ್ರಧಾನಿ ಮಧ್ಯಪ್ರವೇಶ ಅಸಾಧ್ಯ– ಶೆಟ್ಟರ್

Webdunia
ಮಂಗಳವಾರ, 16 ಜನವರಿ 2018 (19:12 IST)
ಮಹಾದಾಯಿ ನೀರಿನ ‌ವಿವಾದದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ‌ಮಾಡುವುದು‌‌ ಅಸಾಧ್ಯ ಎಂದು ವಿಧಾನಸಭೆಯ ವಿರೋಧ ‌ಪಕ್ಷದ‌ ನಾಯಕ‌ ಜಗದೀಶ‌ ಶೆಟ್ಟರ್ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಮಂತ್ರಿ ಆಗಿದ್ದಾಗ ತಮ್ಮಿಂದ ವಿವಾದ ಇತ್ಯರ್ಥ ‌ಕಷ್ಟ ಎನಿಸಿದ್ದರಿಂದಲೇ ಮಹದಾಯಿ ನ್ಯಾಯಮಂಡಳಿ‌ ರಚಿಸುವ‌ ಶಿಫಾರಸನ್ನು ಸುಪ್ರೀಂಕೋರ್ಟಿಗೆ ಮಾಡಿದ್ದರು. ಆದ್ದರಿಂದ ಈಗಿನ ಪರಿಸ್ಥಿತಿಯಲ್ಲಿ ಪ್ರಧಾನಮಂತ್ರಿ ಮಧ್ಯಪ್ರವೇಶಿಸುವುದು ಸಾಧ್ಯವಾಗಲ್ಲ ಎಂದಿದ್ದಾರೆ.
 
ಇಂದಿರಾಗಾಂಧಿ, ವಾಜಪೇಯಿ ಅವರು ಹಲವು ‌ನದಿ‌ ವಿವಾದಗಳನ್ನು ‌ಬಗೆಹರಿಸಿದ್ದಾರೆ‌ ಆದರೆ ಇಂದಿನ ‌ಪರಿಸ್ಥಿತಿ ಬೇರೆಯೇ ಆಗಿದೆ. ರಾಜ್ಯ‌ ಕಾಂಗ್ರೆಸ್ ‌ನಾಯಕರು ಗೋವಾ ಕಾಂಗ್ರೆಸ್ ನಾಯಕರನ್ನು ಒಪ್ಪಿಸುವತನಕ ವಿವಾದ ಇತ್ಯರ್ಥ ಆಗುವುದಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ‌ರಾಜಕಾರಣ‌‌ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments