Webdunia - Bharat's app for daily news and videos

Install App

ಉದ್ಯಾನನಗರಿಗೆ ಆಗಮಿಸಿದ ಪ್ರಧಾನಿ ಮೋದಿ, ಏಂಜೆಲ್: ಸಿದ್ದು, ವಾಲಾರಿಂದ ಸ್ವಾಗತ

Webdunia
ಮಂಗಳವಾರ, 6 ಅಕ್ಟೋಬರ್ 2015 (12:26 IST)
ನಗರದ ಆಡುಗೋಡಿಯಲ್ಲಿನ ಬಾಷ್ ಕಂಪನಿಗೆ ಭೇಟಿ ನೀಡುವ ಸಲುವಾಗಿ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಜರ್ಮನ್ ಚಾನ್ಸೆಲರ್ ಏಂಜಲಾ ಮಾರ್ಕೆಲ್ ಅವರನ್ನು ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಛವನ್ನು ನೀಡಿ ಸ್ವಾಗತಿಸಿದರು. 
ಈ ವೇಳೆ ಬಿಜೆಪಿ ಮುಖಂಡರಾದ ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮೇಯರ್ ಮಂಜುನಾಥ ರೆಡ್ಡಿ ಸೇರಿದಂತೆ ಇನ್ನಿತರರೂ ಕೂಡ ಬರಮಾಡಿಕೊಂಡರು. 
 
ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಆಗಮಿಸಿದ ಮೋದಿ ಹಾಗೂ ಏಂಜೆಲಾ ಮಾರ್ಕೆಲ್ ಬಳಿಕ ನಗರದ ಲೀಲಾ ಪ್ಯಾಲೇಸ್‌ಗೆ ತೆರಳಿ ನಾಸ್ಕಾಂ ಆಯೋಜಿಸಿರುವ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಾಸಾಗಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. 
 
ಇನ್ನು ಪ್ರಧಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ 23 ಪ್ರಮುಖ ರಸ್ತೆಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಖಾಸಗಿ ವಾಹಿನಗಳಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಇದರ ಜೊತೆಗೆ ಸ್ಥಳೀಯ ಖಾಸಗಿ ವಾಹಿನಿಗಳಿಗೆ ವರದಿ ಮಾಡಲೂ ಕೂಡ ಅವಕಾಶ ನೀಡಲಾಗಿಲ್ಲ. ಪ್ರಧಾನಿ ಕಾರ್ಯಾಲಯದ ಸೂಚನೆ ಮೇರೆಗೆ ಕೇವಲ ರಾಷ್ಟ್ರೀಯ ಸುದ್ದಿವಾಹಿನಿಗಳಿಗೆ ಮಾತ್ರ ವರದಿ ಮಾಡಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ. 
 
ಇನ್ನು ಕನ್ನಡದ ಸುದ್ದಿವಾಹಿನಿಗಳಿಗೂ ಕೂಡ ಪಾಸ್ ನಿರಾಕರಿಸಲಾಗಿದ್ದು, ಪ್ರಧಾನಿ ಕಾರ್ಯಾಲಯದ ವರ್ತನೆಗೆ ಸ್ಥಳೀಯ ವಾಹಿನಿಗಳ ಮಾಧ್ಯಮ ಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿಯೂ ಮೋದಿ ಕಾರ್ಯಕ್ರಮಕ್ಕೆ ಸ್ಥಳೀಯ ಮಾಧ್ಯಮಗಳಿಗೆ ಅನುಮತಿ ನೀಡದೆ ತಾರತಮ್ಯವೆಸಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments