Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಭಸ್ಮಾಸುರನಂತೆ: ವಿ.ಎಸ್, ಉಗ್ರಪ್ಪ

ಪ್ರಧಾನಿ ಮೋದಿ ಭಸ್ಮಾಸುರನಂತೆ: ವಿ.ಎಸ್, ಉಗ್ರಪ್ಪ
ಬೆಂಗಳೂರು , ಸೋಮವಾರ, 31 ಜುಲೈ 2017 (13:50 IST)
ಪ್ರಧಾನಿ ನರೇಂದ್ರ ಮೋದಿ ಭಸ್ಮಾಸುರನಂತೆ. ಕೈ ಇಟ್ಟಲೆಲ್ಲಾ ಭಸ್ಮವಾಗುತ್ತಾ ಹೋಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ಭಸ್ಮಾಸುರ. ಅವರು ಎಲ್ಲಿ ಕೈ ಇಡುತ್ತಾರೋ ಅಲ್ಲಿ ಭಸ್ಮವಾಗುತ್ತದೆ ಎಂದು ತಿಳಿಸಿದ್ದಾರೆ.  
 
ಪ್ರಜಾಪ್ರಜಾಪ್ರಭುತ್ವದ ಮೇಲೆ ಕೈ ಇಟ್ಟರು ಬಿಹಾರ್ ಭಸ್ಮವಾಯಿತು. ಜಿಎಸ್‌ಡಿ ತಂದರೂ ದಿನಸಿ ತರಕಾರಿ ದರಗಳು ಗಗನಕ್ಕೇರಿದವು. ಮನ್ ಕೀ ಬಾತ್‌ ನಿಂದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ಪ್ರಧಾನಿ ಮೋದಿಗೆ ಸಂವಿಧಾನದಲ್ಲಿ, ಕಾನೂನಿನಲ್ಲಿ ನಂಬಿಕೆಯಿಲ್ಲ. ಆದ್ದರಿಂದ ಕಾನೂನುಬಾಹಿರವಾಗಿ ರಾಜ್ಯ ಸರಕಾರಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಡೊನಾಲ್ಡ್ ಟ್ರಂಪ್ ಜೊತೆಗಿನ ಸೆಲ್ಫಿ ಈ ದಂಪತಿಗಳ ವಿಚ್ಛೇದನಕ್ಕೆ ಕಾರಣವಾಯ್ತು..!