Webdunia - Bharat's app for daily news and videos

Install App

ಜನವರಿ 12ಕ್ಕೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮನ - ಸಿಎಂ ಬೊಮ್ಮಾಯಿ

Webdunia
ಸೋಮವಾರ, 9 ಜನವರಿ 2023 (20:09 IST)
ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ 12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂದು ಪ್ರಧಾನಿ ಮೋದಿಯವರು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ. ಏಳು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಜನವರಿ 19ಕ್ಕೆ ನಾರಾಯಣಪುರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ  ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments