ಕಾಂಗ್ರೆಸ್​​​​ ವಿರುದ್ದ ಪ್ರಧಾನಿ ಮೋದಿ ಕಿಡಿ

Webdunia
ಗುರುವಾರ, 27 ಏಪ್ರಿಲ್ 2023 (14:00 IST)
ಕಾಂಗ್ರೆಸ್‌ ಅಂದರೆ ಸುಳ್ಳು ಭರವಸೆ, ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ. ಗ್ಯಾರಂಟಿ ಕೊಡುವ ಪರಿಸ್ಥಿತಿಯಲ್ಲಿ
ಕಾಂಗ್ರೆಸ್ ಇಲ್ಲ. ಅವರ ವಾರಂಟಿ ಕೂಡ ಮುಗಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆಸಿದ ಆನ್‌ಲೈನ್‌ ಸಭೆಯಲ್ಲಿ ಮಾತನಾಡಿದರು. ಕಳೆದ 9 ವರ್ಷಗಳಲ್ಲಿ ಭಾರತವು ಜಗತ್ತಿನಾದ್ಯಂತ ಇರುವ ಹೂಡಿಕೆದಾರರಿಗೆ ಪ್ರಮುಖ ತಾಣವಾಗಿ ಮಾರ್ಪಟ್ಟಿದೆ. ಡಬಲ್ ಎಂಜಿನ್ ಸರ್ಕಾರದಿಂದಾಗಿ ಕರ್ನಾಟಕಕ್ಕೆ ಹಲವು ಪ್ರಯೋಜನಗಳು ಲಭಿಸಿವೆ ಎಂದು ಹೇಳಿದರು. 'ಟ್ರ್ಯಾಕ್ಟರ್‌ಗೆ ಮಾರುತಿ ಕಾರಿನ ಚಕ್ರ ಹಾಕಿದರೆ ಅದು ಕೆಲಸ ಮಾಡುತ್ತದೆಯೇ? ಡಬಲ್‌ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯ. ಇಂಥ ಸಣ್ಣ ವಿಚಾರಗಳನ್ನು ಜನರಿಗೆ ತಿಳಿಸಿ, ನೀವು ದೊಡ್ಡ ಭಾಷಣ ಮಾಡುವ ಅಗತ್ಯ ಇಲ್ಲ' ಎಂದು ಪ್ರಧಾನಿ ಮೋದಿ ಕಾರ್ಯಕರ್ತರೊಂದಿಗೆ ಹೇಳಿದರು. 'ಹಿಮಾಚಲ ಪ್ರದೇಶದ ಜನರು ತಮಗೆ ಚುನಾವಣೆ ವೇಳೆ ಲಭಿಸಿದ ಗ್ಯಾರಂಟಿಗಾಗಿ ಕಾಯುತ್ತಿದ್ದಾರೆ. ರಾಜಸ್ಥಾನದಲ್ಲಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವುದೇ ಗ್ಯಾರಂಟಿ ನೀಡದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಹಾಗೂ ಸುಳ್ಳಿನ ಗ್ಯಾರಂಟಿ. ಅವರ ವ್ಯಾರಂಟಿಯೇ ಮುಗಿದಿರುವಾಗ ಯಾವ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಲು ಸಾಧ್ಯ?' ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments