Select Your Language

Notifications

webdunia
webdunia
webdunia
webdunia

ಬೆಳಗಾವಿಗೆ ಮೋದಿ ಭೇಟಿ ವಿರೋಧಿಸಿ ರೈತರ ಪ್ರತಿಭಟನೆ: ನೂರಾರು ರೈತರು ಪೊಲೀಸ್ ವಶಕ್ಕೆ

ಬೆಳಗಾವಿಗೆ ಮೋದಿ ಭೇಟಿ ವಿರೋಧಿಸಿ ರೈತರ ಪ್ರತಿಭಟನೆ: ನೂರಾರು ರೈತರು ಪೊಲೀಸ್ ವಶಕ್ಕೆ
ಬೆಳಗಾವಿ , ಶನಿವಾರ, 27 ಫೆಬ್ರವರಿ 2016 (16:09 IST)
ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕಳಸಾ ಬಂಡೂರಿ ಯೋಜನೆ ಬಗ್ಗೆ ನಿರಾಸಕ್ತಿಯಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಲಾಯನವಾದ ಮಾಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ.
 
ಪ್ರಧಾನಿ ಮೋದಿ ಕಾರ್ಯಕ್ರಮದತ್ತ ತೆರಳಲು ನೂರಾರು ರೈತರು ಪೊಲೀಸ್ ಬ್ಯಾರಿಕೇಡ್ ತಳ್ಳಿ ಮುನ್ನುಗ್ಗಿದಾಗ ಪ್ರತಿಭಟನಾ ನಿರತ ನೂರಾರು ರೈತರನ್ನು  ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. 
 
ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಪ್ರತಿಭಟನೆ ನಡೆಸುತ್ತಿದ್ದು ಪ್ರಧಾನಿ ಮೋದಿ ಕಳಸಾ ಬಂಡೂರಿ ಯೋಜನೆಯ ವಿರೋಧಿಯಾಗಿದ್ದಾರೆ ಎಂದು ಆರೋಪಿಸಿದರು.
 
ಬೆಳಗಾವಿ ಡಿಸಿ ಕಚೇರಿ ಬಳಿ ಪ್ರತಿಭಟನೆ ಕಪ್ಪು ಬಾವುಟ ಹಿಡಿದು ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದಾಗ ಕೆಲ ಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿ ರೈತರನ್ನು ಚದುರಿಸಿದ್ದಾರೆ.

Share this Story:

Follow Webdunia kannada