Publish Date: Fri, 17 Mar 2023 (14:05 IST)
Updated Date: Fri, 17 Mar 2023 (14:07 IST)
ರಾಜ್ಯದಲ್ಲಿ ನಾಲ್ಕು ದಿಕ್ಕಿನಿಂದ ಆರಂಭಗೊಂಡಿರುವ ರಥಯಾತ್ರೆ ಅಂತಿಮ ಹಂತ ತಲುಪಿದ್ದು, ಮಾರ್ಚ್ 25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಹೇಳಿದರು.ಈ ಕೂರಿತು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ನಾಲ್ಕು ರಥಯಾತ್ರೆಗಳು ಯಶಸ್ವಿಯಾಗಿ ಸಾಗುತ್ತಿವೆ ಮಾರ್ಚ್ 21 ವರಗೆ ಯಾತ್ರೆಗಳು ನಡೆಯಲಿವೆ.ಮಾ.25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಭೆಯಿದ್ದು ಪ್ರಧಾನಿ ಮೋದಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.24 ರಂದು ದಾವಣೆಗೆರೆ ದೊಡ್ಡ ಮಟ್ಟದ ರೋಡ್ ಶೋ ಮಾಡಲಿದ್ದೇವೆ.ಈ ಕಾರ್ಯಕ್ರಮಕ್ಕೆ 10 ಲಕ್ಷ ಜನರನ್ನು ಸೇರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.