Webdunia - Bharat's app for daily news and videos

Install App

ಶಾದಿಭಾಗ್ಯದ ಕಾಪಿ ಮಾಡಿದ ಪ್ರಧಾನಿ ಮೋದಿ ಸರಕಾರ: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 7 ಆಗಸ್ಟ್ 2017 (17:32 IST)
ಕೇಂದ್ರ ಸರಕಾರದ ಶಾದಿ ಶುಗುಣ್ ಯೋಜನೆ ರಾಜ್ಯದ ಶಾದಿಭಾಗ್ಯದ ಕಾಪಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಎಲ್ಲಾ ಸಮುದಾಯಗಳ ಏಳಿಗೆಯನ್ನು ಬಯಸುತ್ತದೆ. ಆದರೆ, ವಿಪಕ್ಷಗಳು ಅನಗತ್ಯವಾಗಿ ಸರಕಾರದ ವಿರುದ್ಧ ಆರೋಪ ಮಾಡುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 
 
ರಾಜ್ಯ ಸರಕಾರ ಹಿಂದೆ ಶಾದಿಭಾಗ್ಯ ಯೋಜನೆ ಜಾರಿ ಮಾಡಿದಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದರು. ಇದೀಗ ಏನು ಹೇಳ್ತಾರೆ ಅವರನ್ನೇ ಕೇಳಿ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯ ಸರಕಾರದ ಹಲವಾರು ಯೋಜನೆಗಳನ್ನು ಕೇಂದ್ರ ಸರಕಾರ ಕಾಪಿ ಮಾಡಿದೆ. ರಾಜ್ಯ ಸರಕಾರ ಅಲ್ಪ ಸಂಖ್ಯಾತರ ಪರವಾಗಿ ಯಾವುದೇ ಯೋಜನೆ ಜಾರಿಗೆ ತಂದರೂ ಬಿಜೆಪಿ ವಿರೋಧಿಸುತ್ತದೆ ಎಂದು ಲೇವಡಿ ಮಾಡಿದರು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments