ಪ್ರಧಾನಿ ನರೇಂದ್ರ ಮೋದಿ ಕಾರ್ಪೋರೇಟ್ ಮಗ ಎಂದವರಾರು?

Webdunia
ಶುಕ್ರವಾರ, 13 ಜುಲೈ 2018 (15:50 IST)
 
ಲೋಕಸಭಾ ಚುನಾವಣಾ ಸಮೀಪಿಸಿದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಈಗ ರೈತರ ನೆನಪಾಗಿದೆ. ದೇಶದಲ್ಲಿ ಎಷ್ಟೆ ರ್ಯಾಲಿ ಮಾಡಿದರೂ, ರ್ಯಾಲಿ ಫಲ ನೀಡುವುದಿಲ್ಲ. ರೈತರ ಸಾಲ ಮನ್ನಾ ಮಾಡಿ ರೈತರ ಕಾಳಜಿ ವಹಿಸಬೇಕಿತ್ತು. ಆದ್ರೆ ಪ್ರಧಾನಿ ಕಾರ್ಪೊರೇಟ್ ವಲಯದ ಹಿತ ಕಾಪಾಡಿದ್ದು, ಅವರು ರೈತನ ಮಗನಲ್ಲ ಹೊರತು ಕಾರ್ಪೊರೇಟ್ ಮಗ ಆಗಿದ್ದಾರೆ. ಹೀಗಂತ ಹಿರಿಯ ಕಾಂಗ್ರೆಸ್ ಸಂಸದ ಟಾಂಗ್ ನೀಡಿದ್ದಾರೆ. 
 
ಇಂದಿನಿಂದ ಯಾದಗಿರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಯಿತು. ಸಮ್ಮಿಶ್ರ ಸರ್ಕಾರ ರಚನೆ ನಂತರ  ಯಾದಗಿರಿಯಲ್ಲಿ ಪ್ರಥಮ ಇಂದಿರಾ ಕ್ಯಾಂಟೀನ್ ಇದಾಗಿದೆ. ಸಂಸದ ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಂಡಿತು. ಸಂದರ್ಭದಲ್ಲಿ ಮಾತನಾಡಿದ ಡಾ. ಖರ್ಗೆ, ಲೋಕಸಭಾ ಚುನಾವಣಾ ಸಮೀಪಿಸಿದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಈಗ ರೈತರ ನೆನಪಾಗಿದೆ ಎಂದರು.

ದೇಶದಲ್ಲಿ ಎಷ್ಟೆ ರ್ಯಾಲಿ ಮಾಡಿದರೂ, ರ್ಯಾಲಿ ಫಲ ನೀಡುವುದಿಲ್ಲ. ರೈತರ ಸಾಲ ಮನ್ನಾ ಮಾಡಿ ರೈತರ ಕಾಳಜಿ ವಹಿಸಬೇಕಿತ್ತು. ಆದ್ರೆ ಪ್ರಧಾನಿ ಕಾರ್ಪೊರೇಟ್ ವಲಯದ ಹಿತ ಕಾಪಾಡಿದ್ದು ಅವರು ರೈತನ ಮಗನಲ್ಲ. ಪ್ರಧಾನಿ ಕಾರ್ಪೊರೇಟ್ ಮಗ ಆಗಿದ್ದಾರೆ. ರೈತರ ಸಾಲ ಮನ್ನಾ ಮಾಡದೇ ರೈತರ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಇದು ಚುನಾವಣಾ ಗಿಮೀಕ್ ಆಗಿದೆ ಅಷ್ಟೇ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಕಾಂಗ್ರೆಸ್ ಹೈಕಮಾಂಡಗೆ ಬಿಟ್ಟದ್ದು ಎಂದು ಲೋಕಸಭಾ ಕಾಂಗ್ರೆಸ್ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments