Webdunia - Bharat's app for daily news and videos

Install App

ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 25 ಜುಲೈ 2017 (13:50 IST)
ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ. ಆದರೆ, ನಾವು ಪ್ರಚಾರ ಮಾಡದೇ ಜನರ ಸೇವೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ರಾಜ್ಯದ 6.5 ಕೋಟಿ ಜನರಿಗೆ ಸರಕಾರ ಜಾರಿಗೊಳಿಸಿದ ಒಂದಲ್ಲ ಒಂದು ಯೋಜನೆ ತಲುಪುವಂತೆ ಜಾರಿಗೊಳಿಸಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಬಹುತೇಕ ಆಶ್ವಾಸನೆಗಳನ್ನು ಪೂರೈಸಿದ್ದೇವೆ. ಇನ್ನುಳಿದ ಆಶ್ವಾಸನೆಗಳನ್ನು ಮುಂಬರುವ ದಿನಗಳಲ್ಲಿ ಪೂರೈಸುತ್ತೇವೆ ಎಂದು ಭರವಸೆ ನೀಡಿದರು.   
 
ಜನಧನ ಖಾತೆ ತೆರೆಯಿರಿ 15 ಲಕ್ಷ ರೂಪಾಯಿ ಹಣ ನಿಮ್ಮ ಖಾತೆಗೆ ಬರುತ್ತೆ ಎಂದಿದ್ದರು ಪ್ರಧಾನಿ ಮೋದಿ. ಆದರೆ, ನಿಮ್ಮ ಖಾತೆಗೆ 15 ರೂಪಾಯಿ ಕೂಡಾ ಬರಲಿಲ್ಲ, ಇದು ಕೇವಲ ಪ್ರಚಾರಕ್ಕಾಗಿ ಮಾಡಿದ್ದು ಅನ್ನೋದು ನಿಮಗೆ ಗೊತ್ತು ಎಂದು ವ್ಯಂಗ್ಯವಾಡಿದರು.
 
ಪರಿಶಿಷ್ಠ ಜಾತಿಯವರಿಗೆ 27400 ಕೋಟಿ ರೂಪಾಯಿಗಳನ್ನು ಮೀಸಲಾಗಿರಿಸಿದ್ದೇವೆ. ಹಿಂದೆಂದೂ ವಿಪಕ್ಷಗಳು ಇಂತಹ ಮೊತ್ತವನ್ನು ಮೀಸಲಾಗಿಟ್ಟಿರಲಿಲ್ಲ. ಬಡವರ, ಶೋಷಿತರ, ದೀನ ದಲಿತರ ಏಳಿಗೆಯೇ ಕಾಂಗ್ರೆಸ್ ಪಕ್ಷದ ಮುಖ್ಯ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments