Webdunia - Bharat's app for daily news and videos

Install App

ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 25 ಜುಲೈ 2017 (13:50 IST)
ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ. ಆದರೆ, ನಾವು ಪ್ರಚಾರ ಮಾಡದೇ ಜನರ ಸೇವೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ರಾಜ್ಯದ 6.5 ಕೋಟಿ ಜನರಿಗೆ ಸರಕಾರ ಜಾರಿಗೊಳಿಸಿದ ಒಂದಲ್ಲ ಒಂದು ಯೋಜನೆ ತಲುಪುವಂತೆ ಜಾರಿಗೊಳಿಸಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಬಹುತೇಕ ಆಶ್ವಾಸನೆಗಳನ್ನು ಪೂರೈಸಿದ್ದೇವೆ. ಇನ್ನುಳಿದ ಆಶ್ವಾಸನೆಗಳನ್ನು ಮುಂಬರುವ ದಿನಗಳಲ್ಲಿ ಪೂರೈಸುತ್ತೇವೆ ಎಂದು ಭರವಸೆ ನೀಡಿದರು.   
 
ಜನಧನ ಖಾತೆ ತೆರೆಯಿರಿ 15 ಲಕ್ಷ ರೂಪಾಯಿ ಹಣ ನಿಮ್ಮ ಖಾತೆಗೆ ಬರುತ್ತೆ ಎಂದಿದ್ದರು ಪ್ರಧಾನಿ ಮೋದಿ. ಆದರೆ, ನಿಮ್ಮ ಖಾತೆಗೆ 15 ರೂಪಾಯಿ ಕೂಡಾ ಬರಲಿಲ್ಲ, ಇದು ಕೇವಲ ಪ್ರಚಾರಕ್ಕಾಗಿ ಮಾಡಿದ್ದು ಅನ್ನೋದು ನಿಮಗೆ ಗೊತ್ತು ಎಂದು ವ್ಯಂಗ್ಯವಾಡಿದರು.
 
ಪರಿಶಿಷ್ಠ ಜಾತಿಯವರಿಗೆ 27400 ಕೋಟಿ ರೂಪಾಯಿಗಳನ್ನು ಮೀಸಲಾಗಿರಿಸಿದ್ದೇವೆ. ಹಿಂದೆಂದೂ ವಿಪಕ್ಷಗಳು ಇಂತಹ ಮೊತ್ತವನ್ನು ಮೀಸಲಾಗಿಟ್ಟಿರಲಿಲ್ಲ. ಬಡವರ, ಶೋಷಿತರ, ದೀನ ದಲಿತರ ಏಳಿಗೆಯೇ ಕಾಂಗ್ರೆಸ್ ಪಕ್ಷದ ಮುಖ್ಯ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments