Webdunia - Bharat's app for daily news and videos

Install App

ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ- ಸಿದ್ಧರಾಮಯ್ಯ ಆರೋಪ

Webdunia
ಸೋಮವಾರ, 11 ಫೆಬ್ರವರಿ 2019 (11:40 IST)
ಹುಬ್ಬಳ್ಳಿ : ‘ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ. ಅವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ಗೊತ್ತಿಲ್ಲ’ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ಭಾನುವಾರ ರಫೇಲ್ ಬಗ್ಗೆ ದೇಶದ ಚೌಕಿದಾರ ಮಾತಾಡಿಲ್ಲ. ಆದರೆ ರೈತರ ಸಾಲದ ಬಗ್ಗೆ ಮಾತನಾಡಿದ್ದಾರೆ. ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಿಲ್ಲ? ರೈತರ ಸಾಲಮನ್ನಾ ಮಾಡುವಂತೆ ಎರಡು ಬಾರಿ ನಿಯೋಗಕ್ಕೆ ಮನವಿ  ಮಾಡಿದ್ದೆ. ಅವರು ಇದೂವರೆಗೂ ರೈತರ ಸಾಲಮನ್ನಾ ಮಾಡಿಲ್ಲ. ನಾವು ಈ ವರ್ಷದ ಬಜೆಟ್‍ ನಲ್ಲಿ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ಹಾಗೇ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 22 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕರ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು,’ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ. ಆವಾಗ ಗೊತ್ತಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments